ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಯಾರೇ ಗೆದ್ದರೂ ಇತಿಹಾಸ ನಿರ್ಮಾಣ!

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹಳ ಜಿದ್ದಾಜಿದ್ದಿನಿಂದ ನಡೆದ ತ್ರಿಕೋನ ಸ್ಪರ್ಧೆಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕ್ಷೇತ್ರದಲ್ಲಿ ಯಾರೇ ಗೆದ್ದರೂ ಮೈಲುಗಲ್ಲು ಸ್ಥಾಪನೆಯಾಗಲಿದೆ. ಇದಕ್ಕೆ ಪೂರಕ ಎಂಬಂತೆ ತಾಲ್ಲೂಕಿನಲ್ಲಿ ಈ ಬಾರಿ ರಣಕಣದಲ್ಲಿ ಅತ್ಯಂತ ಅಧಿಕ ಶೇಕಡಾವಾರು ಮತದಾನ ದಾಖಲಾಗಿರುವುದು. ಮೂರು ಪಕ್ಷಗಳ ಅಭ್ಯರ್ಥಿಗಳಾದ ಕಾಂಗ್ರೆಸ್‌ನ ಟಿ.ವೆಂಕಟರಮಣಯ್ಯ, ಬಿಜೆಪಿಯ ಧೀರಜ್ ಮುನಿರಾಜ್, ಜೆಡಿಎಸ್ ನ ಬಿ.ಮುನೇಗೌಡರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.

ಬಿಜೆಪಿಗೆ ವಿಜಯಮಾಲೆ ಒಲಿದರೆ ಹೊಸ ನಾಯಕನ ಸೃಷ್ಟಿ

ರಾಜ್ಯ ಬಿಜೆಪಿಯಲ್ಲಿ ಓರ್ವ ಅಭ್ಯರ್ಥಿ ಅಧಿಕಾರದ ಗದ್ದುಗೆ ಏರಿದ ಪ್ರಪ್ರಥಮ ಕ್ಷೇತ್ರವೇ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ. ಬಿಜೆಪಿ ಕಟ್ಟಾಳು ಹಿರಿಯ ಮುಖಂಡ ಕೆ.ಎಂ ಹನುಮಂತರಾಯಪ್ಪ ಮೊದಲ ಬಾರಿಗೆ (1983-85) ಪುರಸಭೆ ಚುನಾವಣೆಯಲ್ಲಿ ಗೆದ್ದು ಪುರಸಭೆ ಅಧ್ಯಕ್ಷರಾಗುವ ಮೂಲಕ ಬಿಜೆಪಿ ಬಾವುಟವನ್ನು ಹಾರಿಸಿದ್ದರು. ಬಳಿಕ ಬಿಜೆಪಿಯೂ ತಾಲ್ಲೂಕಿನಲ್ಲಿ ತನ್ನದೇ ಕಾರ್ಯಕರ್ತರ ಪಡೆಯನ್ನು ಸೃಷ್ಟಿ ಮಾಡಿತ್ತಾದರೂ ದೀರ್ಘಾವಧಿಯ ಆಡಳಿತ ನಡೆಸಲು ವಿಫಲವಾಯಿತು.

ಒಮ್ಮೆ ಗಂಟಿಗಾನಹಳ್ಳಿ ಕೃಷ್ಣಪ್ಪ ಮತ್ತು ಉಪ ಚುನಾವಣೆಯಲ್ಲಿ ಜೆ.ನರಸಿಂಹಸ್ವಾಮಿ ಬಿಜೆಪಿಯಿಂದ ಆರಿಸಿ ಬಂದರೂ ಪಕ್ಷ ಸಂಘಟನೆಯಲ್ಲಿ ವಿಫಲವಾದರು.
ಕಾಲಕಳೆದಂತೆ ಕ್ಷೇತ್ರದಲ್ಲಿ ಸುಮಾರು 30 ಸಾವಿರಾಕ್ಕೂ ಸಾಂಪ್ರದಾಯಿಕ ಮತಗಳಿದ್ದರೂ ವಿಧಾನಸಭೆ ಚುನಾವಣೆಗಳಲ್ಲಿ ಸೋಲನ್ನುಭವಿಸುವಂತಾಗಿತ್ತು. ಆದರೆ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಠಕ್ಕರ್ ಕೊಡುವಲ್ಲಿ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಯಶಸ್ವಿಯಾಗಿದ್ದಾರೆ. ಹಲವು ಸಾಮಾಜಿಕ,  ಧಾರ್ಮಿಕ, ಆರೋಗ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪಕ್ಷ ಸಂಘಟಿಸಿ ಚುನಾವಣೆ ಎದುರಿಸಿರುವ ಧೀರಜ್ ಮುನಿರಾಜು ವಿಜಯಮಾಲೆಯ ನಿರೀಕ್ಷೆಯಲ್ಲಿದ್ದಾರೆ. ನಿರೀಕ್ಷೆಯಂತೆ ಬಿಜೆಪಿ ಗೆಲುವು ಸಾಧಿಸಿದರೆ ಬಿಜೆಪಿಗೆ ಹೊಸ ನಾಯಕನ ಆಗಮನವಾಗಲಿದೆ.

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಟಿ.ವೆಂಕಟರಮಣಯ್ಯ?

ಎರಡು ಬಾರಿ ಗೆದ್ದು ಬೀಗಿರುವ ‘ಕೈ’ ಅಭ್ಯರ್ಥಿ ಟಿ.ವೆಂಕಟರಮಣಯ್ಯ ಮೂರನೇ ಬಾರಿಗೆ ಕಾಂಗ್ರೆಸ್ ನ ಹುರಿಯಾಳಾಗಿ ಅದೃಷ್ಟದ ಪರೀಕ್ಷೆಗಿಳಿದಿದ್ದಾರೆ. ಒಂದು ವೇಳೆ ಟಿ.ವೆಂಕಟರಮಣಯ್ಯನವರು ಹ್ಯಾಟ್ರಿಕ್ ಗೆಲುವಿನ ನಗಾರಿ ಬಾರಿಸಿದರೆ ಕ್ಷೇತ್ರದ ಜನತೆಗೆ ಟಿ.ಸಿದ್ದಲಿಂಗಯ್ಯ, ಜಿ.ರಾಮೇಗೌಡ, ಮತ್ತು ಆರ್.ಎಲ್ ಜಾಲಪ್ಪ ಬಳಿಕ
ಸಚಿವ ಸ್ಥಾನ ಲಭಿಸುವ ವಿಶ್ವಾಸದಲ್ಲಿದ್ದಾರೆ.

ಮತ ಪ್ರಚಾರದಲ್ಲಿಯೂ ಕಾಂಗ್ರೆಸ್ ಮುಖಂಡರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿದರೆ ಸಚಿವರಿಗೆ ನೀಡಿದಂತೆ ಎಂದು ಮತಯಾಚನೆ ಮಾಡಿದ್ದರು. ಈ ಮೂಲಕ ಹ್ಯಾಟ್ರಿಕ್ ಗೆಲುವು ಮತ್ತು ಮಂತ್ರಿಗಿರಿ ಪಟ್ಟ ಸಿಕ್ಕಿಯಾದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಜೆಡಿಎಸ್ ಗೆದ್ದರೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾತೆ ತೆರೆದ ಪಟ್ಟ

ಸತತವಾಗಿ ಮೂರು ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಸ್ಪರ್ಧೆ ನೀಡುತ್ತಾ ಜೆಡಿಎಸ್ ಪಕ್ಷ ಸಂಘಟನೆ ಮಾಡಿರುವ ಬಿ.ಮುನೇಗೌಡ ಅವರು ನಾಲ್ಕನೇ ಬಾರಿಗೆ ರಣಕಣದಲ್ಲಿ ಸೆಣಸಾಡಿದ್ದಾರೆ. ಕ್ಷೇತ್ರದಲ್ಲಿ ಸೋತರೂ
ಕಳೆದ 14 ವರ್ಷಗಳ ನಿರಂತರ ಸೇವೆ ಮಾಡಿ ನೀರು ಮುನೇಗೌಡರೆಂದೇ ಜನಮನ್ನಣೆ ಗಳಿಸಿರುವ ಮುನೇಗೌಡರಿಗೆ ಅಧಿಕಾರದ ಚುಕ್ಕಾಣಿ ಮಾತ್ರ ದೂರದ ಮಾತಾಗಿದೆ.

ಅಂತೆಯೇ ಪಕ್ಷದ ಕಾರ್ಯಕರ್ತರೂ ಅಧಿಕಾರವಿಲ್ಲದೆ ಪರಿತಪಿಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಹಿರಿಯ, ಕಿರಿಯ ಮುಖಂಡರು ಒಗ್ಗಟ್ಟಿನಿಂದ ಯಾವುದೇ ಗೊಂದಲವಿಲ್ಲದೆ ಚುನಾವಣೆ ನಡೆಸಿದ್ದಾರೆ. ಅಭ್ಯರ್ಥಿ ಮುನೇಗೌಡರ ಪತ್ನಿ ಪದ್ಮಾವತಿ ಅವರ ಕಣ್ಣೀರು, ಸೊರಗೊಡ್ಡಿ ಮತಯಾಚನೆ ಮಾಡಿರುವುದು ಅನುಕಂಪದ ಅಲೆ ಮತಗಳಾಗಿ ಪರಿವರ್ತನೆಯಾದರೆ ಜೆಡಿಎಸ್ ಇದೇ ಮೊದಲ ಬಾರಿಗೆ ಅಧಿಕಾರದ ಗದ್ದುಗೆಗೆ ಏರಲಿದೆ.

ಕ್ಷೇತ್ರದಲ್ಲಿ ಮೊದಲ ಬಾರಿ ಸ್ಪರ್ಧಿಸಿರುವ ಎಎಪಿ ಪ್ರತಿ ಮನೆ‌ ಮನೆಗೂ ತಲುಪಿದ್ದು, ಮತ ಗಳಿಕೆ ಪ್ರಮಾಣವು ಹೆಚ್ಚಾಗುವ ನಿರೀಕ್ಷೆ ಇದೆ.

Ramesh Babu

Journalist

Recent Posts

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

4 minutes ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

1 hour ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

15 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

17 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

20 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago