ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿಂದು ಡಿವೈಎಸ್ಪಿ ಪಾಂಡುರಂಗ ಹಾಗೂ ಇನ್ ಸ್ಪೆಕ್ಟರ್ ಸಾದಿಕ್ ಪಾಷ ನೇತ್ವದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಎಲ್ಲಾ ಎಂಒಬಿಗಳ ಪರೇಡ್ ನಡೆಯಿತು.
ಈ ವೇಳೆ ಡಿವೈಎಸ್ಪಿ ಪಾಂಡುರಂಗ ಮಾತನಾಡಿ, ರಾತ್ರಿ ಕಳ್ಳತನ ಮಾಡಿ ಬೆಳಿಗ್ಗೆ ಡ್ಯೂಟಿ ಅಂತ ಹೇಳಿದ್ರೆ ಪೋಲಿಸರು ಸುಮ್ಮನಿರಲ್ಲ. ಹಳೇ ಕಳ್ಳರ ಮೇಲೂ ಪೊಲೀಸರ ನಿಗಾ ಇದ್ದೆ ಇರುತ್ತದೆ ಎಂದರು.
ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬೇಡಿ. ಸಮಾಜದಲ್ಲಿ ಉತ್ತಮ ಕೆಲಸವನ್ನು ಮಾಡಿ. ಸಮಾಜದಲ್ಲಿ ಗೌರವಯುತವಾಗಿ ಬಾಳಲು ಪ್ರಯತ್ನಿಸಬೇಕು. ಅದಕ್ಕೆ ನಾವು ಕೂಡ ಸಹಾಯ ಮಾಡುತ್ತೇವೆ ಎಂದರು.
ಕಳ್ಳರ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆಗೆ ತಿಳಿಸುವಂತೆ ಹಳೇ ಕಳ್ಳರಿಗೆ ಸಲಹೆ ನೀಡಿದರು.
ಸಮಾಜದ ಶಾಂತಿಗೆ ಧಕ್ಕೆಯಾಗದಂತೆ ಇರಬೇಕು. ಯಾವುದೇ ಅಕ್ರಮ ಕೆಲಸದಲ್ಲಿ ಭಾಗಿಯಾದರೆ ಅವರ ಮೇಲೆ ಕ್ರಮವಹಿಸಲಾಗುತ್ತದೆ ಎಂದರು.
ಈ ವೇಳೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…