ದೊಡ್ಡಬಳ್ಳಾಪುರ ಜನತೆಯ ಪ್ರೀತಿಗೆ ಚಿರಋಣಿ:ಡಿವೈಎಸ್ಪಿ ರವಿ.ಪಿ

ಕಳ್ಳರ ಜಾಡು ಹಿಡಿದು ಸೆರೆ ಹಿಡಿಯುವಾಗ ಹುತಾತ್ಮರಾದ ಪಿಎಸ್ ಐ ಜಗದೀಶ್ ರವನ್ನ ಕಳೆದ ಎಂಟು ವರ್ಷಗಳಿಂದ ನೆನೆಯುತ್ತಿರುವ ದೊಡ್ಡಬಳ್ಳಾಪುರ ಜನತೆಗೆ ಸದಾ ಚಿರಋಣಿಯಾಗಿರುವುದಾಗಿ ಡಿವೈಎಸ್ಪಿ ರವಿ.ಪಿ ಅವರು ಹೇಳಿದರು.

ನಗರದ ಪಿಎಸ್ ಐ ಜಗದೀಶ್ ವೃತ್ತದಲ್ಲಿ ಪಿಎಸ್ ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಪಿಎಸ್ ಐ ಜಗದೀಶ್ ಅವರ 8ನೇ ವರ್ಷದ ಪುಣ್ಯಸ್ಮರಣೆಯನ್ನು ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಹಳ ಅವಿಸ್ಮರಣೀಯ ಕಾರ್ಯಕ್ರಮ ಇದು , ಜನರೊಂದಿಗೆ ಬೆರಯುವ ಪೊಲೀಸ್ ಅಧಿಕಾರಿಗಳನ್ನ ನೆನೆಯುವ ಪದ್ದತಿ ನಮ್ಮಲಿದೆ, ದೊಡ್ಡಬಳ್ಳಾಪುರದ ಜನ ಬಹಳ ವಿಶೇಷತೆಯನ್ನ ಹೊಂದಿದ್ದಾರೆ, ನಾನು 25 ವರ್ಷಗಳ ಸೇವೆಯಲ್ಲಿ ದೊಡ್ಡಬಳ್ಳಾಪುರದ ಜನತೆ ನೀಡುವ ಪ್ರೀತಿಯನ್ನ ನೋಡಿಲ್ಲ ಎಂದು ಹೇಳಿದರು.

ಇಲ್ಲಿನ ಜನರು 8 ವರ್ಷದ ಘಟನೆಯನ್ನ ಈಗಲೂ ಜೀವಂತ ಇಟ್ಟಿದ್ದು, ಪಿಎಸ್ಐ ಜಗದೀಶ್ ರವರ ಹುಟ್ಟಹಬ್ಬ ಮತ್ತು ಪುಣ್ಯಸ್ಮರಣೆಯನ್ನ ಆಚರಿಸಿಕೊಂಡು ಬರುತ್ತಿದ್ದಾರೆ, ಪೊಲೀಸ್ ಇಲಾಖೆಯ ಬಗ್ಗೆ ಇಟ್ಟಿರುವ ಗೌರವ ನಂಬಿಕೆಗೆ ನಾವು ಚಿರಋಣಿಯಾಗಿರುವುದ್ದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಠಾಣೆ ಪಿಐ ಅಮರೇಶ ಗೌಡ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ, ಪೌರಾಯುಕ್ತ ಪರಮೇಶ್, ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ನಗರಸಭೆ ಸದಸ್ಯರಾದ ಇಂದ್ರಾಣಿ, ಆದಿಲಕ್ಷ್ಮಿ, ಮಲ್ಲೇಶ್, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಕೃಷ್ಣಪ್ಪ, ಕೃಷ್ಣಮೂರ್ತಿ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

2 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

13 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

14 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

22 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 days ago