ದೊಡ್ಡಬಳ್ಳಾಪುರ ಜನತೆಯ ಪ್ರೀತಿಗೆ ಚಿರಋಣಿ:ಡಿವೈಎಸ್ಪಿ ರವಿ.ಪಿ

ಕಳ್ಳರ ಜಾಡು ಹಿಡಿದು ಸೆರೆ ಹಿಡಿಯುವಾಗ ಹುತಾತ್ಮರಾದ ಪಿಎಸ್ ಐ ಜಗದೀಶ್ ರವನ್ನ ಕಳೆದ ಎಂಟು ವರ್ಷಗಳಿಂದ ನೆನೆಯುತ್ತಿರುವ ದೊಡ್ಡಬಳ್ಳಾಪುರ ಜನತೆಗೆ ಸದಾ ಚಿರಋಣಿಯಾಗಿರುವುದಾಗಿ ಡಿವೈಎಸ್ಪಿ ರವಿ.ಪಿ ಅವರು ಹೇಳಿದರು.

ನಗರದ ಪಿಎಸ್ ಐ ಜಗದೀಶ್ ವೃತ್ತದಲ್ಲಿ ಪಿಎಸ್ ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಪಿಎಸ್ ಐ ಜಗದೀಶ್ ಅವರ 8ನೇ ವರ್ಷದ ಪುಣ್ಯಸ್ಮರಣೆಯನ್ನು ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಹಳ ಅವಿಸ್ಮರಣೀಯ ಕಾರ್ಯಕ್ರಮ ಇದು , ಜನರೊಂದಿಗೆ ಬೆರಯುವ ಪೊಲೀಸ್ ಅಧಿಕಾರಿಗಳನ್ನ ನೆನೆಯುವ ಪದ್ದತಿ ನಮ್ಮಲಿದೆ, ದೊಡ್ಡಬಳ್ಳಾಪುರದ ಜನ ಬಹಳ ವಿಶೇಷತೆಯನ್ನ ಹೊಂದಿದ್ದಾರೆ, ನಾನು 25 ವರ್ಷಗಳ ಸೇವೆಯಲ್ಲಿ ದೊಡ್ಡಬಳ್ಳಾಪುರದ ಜನತೆ ನೀಡುವ ಪ್ರೀತಿಯನ್ನ ನೋಡಿಲ್ಲ ಎಂದು ಹೇಳಿದರು.

ಇಲ್ಲಿನ ಜನರು 8 ವರ್ಷದ ಘಟನೆಯನ್ನ ಈಗಲೂ ಜೀವಂತ ಇಟ್ಟಿದ್ದು, ಪಿಎಸ್ಐ ಜಗದೀಶ್ ರವರ ಹುಟ್ಟಹಬ್ಬ ಮತ್ತು ಪುಣ್ಯಸ್ಮರಣೆಯನ್ನ ಆಚರಿಸಿಕೊಂಡು ಬರುತ್ತಿದ್ದಾರೆ, ಪೊಲೀಸ್ ಇಲಾಖೆಯ ಬಗ್ಗೆ ಇಟ್ಟಿರುವ ಗೌರವ ನಂಬಿಕೆಗೆ ನಾವು ಚಿರಋಣಿಯಾಗಿರುವುದ್ದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಠಾಣೆ ಪಿಐ ಅಮರೇಶ ಗೌಡ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ, ಪೌರಾಯುಕ್ತ ಪರಮೇಶ್, ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ನಗರಸಭೆ ಸದಸ್ಯರಾದ ಇಂದ್ರಾಣಿ, ಆದಿಲಕ್ಷ್ಮಿ, ಮಲ್ಲೇಶ್, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಕೃಷ್ಣಪ್ಪ, ಕೃಷ್ಣಮೂರ್ತಿ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

34 minutes ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

37 minutes ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

59 minutes ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

4 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

10 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

12 hours ago