ಕಳ್ಳರ ಜಾಡು ಹಿಡಿದು ಸೆರೆ ಹಿಡಿಯುವಾಗ ಹುತಾತ್ಮರಾದ ಪಿಎಸ್ ಐ ಜಗದೀಶ್ ರವನ್ನ ಕಳೆದ ಎಂಟು ವರ್ಷಗಳಿಂದ ನೆನೆಯುತ್ತಿರುವ ದೊಡ್ಡಬಳ್ಳಾಪುರ ಜನತೆಗೆ ಸದಾ ಚಿರಋಣಿಯಾಗಿರುವುದಾಗಿ ಡಿವೈಎಸ್ಪಿ ರವಿ.ಪಿ ಅವರು ಹೇಳಿದರು.
ನಗರದ ಪಿಎಸ್ ಐ ಜಗದೀಶ್ ವೃತ್ತದಲ್ಲಿ ಪಿಎಸ್ ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಪಿಎಸ್ ಐ ಜಗದೀಶ್ ಅವರ 8ನೇ ವರ್ಷದ ಪುಣ್ಯಸ್ಮರಣೆಯನ್ನು ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಹಳ ಅವಿಸ್ಮರಣೀಯ ಕಾರ್ಯಕ್ರಮ ಇದು , ಜನರೊಂದಿಗೆ ಬೆರಯುವ ಪೊಲೀಸ್ ಅಧಿಕಾರಿಗಳನ್ನ ನೆನೆಯುವ ಪದ್ದತಿ ನಮ್ಮಲಿದೆ, ದೊಡ್ಡಬಳ್ಳಾಪುರದ ಜನ ಬಹಳ ವಿಶೇಷತೆಯನ್ನ ಹೊಂದಿದ್ದಾರೆ, ನಾನು 25 ವರ್ಷಗಳ ಸೇವೆಯಲ್ಲಿ ದೊಡ್ಡಬಳ್ಳಾಪುರದ ಜನತೆ ನೀಡುವ ಪ್ರೀತಿಯನ್ನ ನೋಡಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರ ಠಾಣೆ ಪಿಐ ಅಮರೇಶ ಗೌಡ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ, ಪೌರಾಯುಕ್ತ ಪರಮೇಶ್, ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ನಗರಸಭೆ ಸದಸ್ಯರಾದ ಇಂದ್ರಾಣಿ, ಆದಿಲಕ್ಷ್ಮಿ, ಮಲ್ಲೇಶ್, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಕೃಷ್ಣಪ್ಪ, ಕೃಷ್ಣಮೂರ್ತಿ ಇತರರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…