ಕಳ್ಳರ ಜಾಡು ಹಿಡಿದು ಸೆರೆ ಹಿಡಿಯುವಾಗ ಹುತಾತ್ಮರಾದ ಪಿಎಸ್ ಐ ಜಗದೀಶ್ ರವನ್ನ ಕಳೆದ ಎಂಟು ವರ್ಷಗಳಿಂದ ನೆನೆಯುತ್ತಿರುವ ದೊಡ್ಡಬಳ್ಳಾಪುರ ಜನತೆಗೆ ಸದಾ ಚಿರಋಣಿಯಾಗಿರುವುದಾಗಿ ಡಿವೈಎಸ್ಪಿ ರವಿ.ಪಿ ಅವರು ಹೇಳಿದರು.
ನಗರದ ಪಿಎಸ್ ಐ ಜಗದೀಶ್ ವೃತ್ತದಲ್ಲಿ ಪಿಎಸ್ ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಪಿಎಸ್ ಐ ಜಗದೀಶ್ ಅವರ 8ನೇ ವರ್ಷದ ಪುಣ್ಯಸ್ಮರಣೆಯನ್ನು ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಹಳ ಅವಿಸ್ಮರಣೀಯ ಕಾರ್ಯಕ್ರಮ ಇದು , ಜನರೊಂದಿಗೆ ಬೆರಯುವ ಪೊಲೀಸ್ ಅಧಿಕಾರಿಗಳನ್ನ ನೆನೆಯುವ ಪದ್ದತಿ ನಮ್ಮಲಿದೆ, ದೊಡ್ಡಬಳ್ಳಾಪುರದ ಜನ ಬಹಳ ವಿಶೇಷತೆಯನ್ನ ಹೊಂದಿದ್ದಾರೆ, ನಾನು 25 ವರ್ಷಗಳ ಸೇವೆಯಲ್ಲಿ ದೊಡ್ಡಬಳ್ಳಾಪುರದ ಜನತೆ ನೀಡುವ ಪ್ರೀತಿಯನ್ನ ನೋಡಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರ ಠಾಣೆ ಪಿಐ ಅಮರೇಶ ಗೌಡ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ, ಪೌರಾಯುಕ್ತ ಪರಮೇಶ್, ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ನಗರಸಭೆ ಸದಸ್ಯರಾದ ಇಂದ್ರಾಣಿ, ಆದಿಲಕ್ಷ್ಮಿ, ಮಲ್ಲೇಶ್, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಕೃಷ್ಣಪ್ಪ, ಕೃಷ್ಣಮೂರ್ತಿ ಇತರರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…