ದೊಡ್ಡಬಳ್ಳಾಪುರ ಜನತೆಯ ಪ್ರೀತಿಗೆ ಚಿರಋಣಿ:ಡಿವೈಎಸ್ಪಿ ರವಿ.ಪಿ

ಕಳ್ಳರ ಜಾಡು ಹಿಡಿದು ಸೆರೆ ಹಿಡಿಯುವಾಗ ಹುತಾತ್ಮರಾದ ಪಿಎಸ್ ಐ ಜಗದೀಶ್ ರವನ್ನ ಕಳೆದ ಎಂಟು ವರ್ಷಗಳಿಂದ ನೆನೆಯುತ್ತಿರುವ ದೊಡ್ಡಬಳ್ಳಾಪುರ ಜನತೆಗೆ ಸದಾ ಚಿರಋಣಿಯಾಗಿರುವುದಾಗಿ ಡಿವೈಎಸ್ಪಿ ರವಿ.ಪಿ ಅವರು ಹೇಳಿದರು.

ನಗರದ ಪಿಎಸ್ ಐ ಜಗದೀಶ್ ವೃತ್ತದಲ್ಲಿ ಪಿಎಸ್ ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಪಿಎಸ್ ಐ ಜಗದೀಶ್ ಅವರ 8ನೇ ವರ್ಷದ ಪುಣ್ಯಸ್ಮರಣೆಯನ್ನು ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಹಳ ಅವಿಸ್ಮರಣೀಯ ಕಾರ್ಯಕ್ರಮ ಇದು , ಜನರೊಂದಿಗೆ ಬೆರಯುವ ಪೊಲೀಸ್ ಅಧಿಕಾರಿಗಳನ್ನ ನೆನೆಯುವ ಪದ್ದತಿ ನಮ್ಮಲಿದೆ, ದೊಡ್ಡಬಳ್ಳಾಪುರದ ಜನ ಬಹಳ ವಿಶೇಷತೆಯನ್ನ ಹೊಂದಿದ್ದಾರೆ, ನಾನು 25 ವರ್ಷಗಳ ಸೇವೆಯಲ್ಲಿ ದೊಡ್ಡಬಳ್ಳಾಪುರದ ಜನತೆ ನೀಡುವ ಪ್ರೀತಿಯನ್ನ ನೋಡಿಲ್ಲ ಎಂದು ಹೇಳಿದರು.

ಇಲ್ಲಿನ ಜನರು 8 ವರ್ಷದ ಘಟನೆಯನ್ನ ಈಗಲೂ ಜೀವಂತ ಇಟ್ಟಿದ್ದು, ಪಿಎಸ್ಐ ಜಗದೀಶ್ ರವರ ಹುಟ್ಟಹಬ್ಬ ಮತ್ತು ಪುಣ್ಯಸ್ಮರಣೆಯನ್ನ ಆಚರಿಸಿಕೊಂಡು ಬರುತ್ತಿದ್ದಾರೆ, ಪೊಲೀಸ್ ಇಲಾಖೆಯ ಬಗ್ಗೆ ಇಟ್ಟಿರುವ ಗೌರವ ನಂಬಿಕೆಗೆ ನಾವು ಚಿರಋಣಿಯಾಗಿರುವುದ್ದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಠಾಣೆ ಪಿಐ ಅಮರೇಶ ಗೌಡ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ, ಪೌರಾಯುಕ್ತ ಪರಮೇಶ್, ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ನಗರಸಭೆ ಸದಸ್ಯರಾದ ಇಂದ್ರಾಣಿ, ಆದಿಲಕ್ಷ್ಮಿ, ಮಲ್ಲೇಶ್, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಕೃಷ್ಣಪ್ಪ, ಕೃಷ್ಣಮೂರ್ತಿ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

7 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago