ಕಳ್ಳರ ಜಾಡು ಹಿಡಿದು ಸೆರೆ ಹಿಡಿಯುವಾಗ ಹುತಾತ್ಮರಾದ ಪಿಎಸ್ ಐ ಜಗದೀಶ್ ರವನ್ನ ಕಳೆದ ಎಂಟು ವರ್ಷಗಳಿಂದ ನೆನೆಯುತ್ತಿರುವ ದೊಡ್ಡಬಳ್ಳಾಪುರ ಜನತೆಗೆ ಸದಾ ಚಿರಋಣಿಯಾಗಿರುವುದಾಗಿ ಡಿವೈಎಸ್ಪಿ ರವಿ.ಪಿ ಅವರು ಹೇಳಿದರು.
ನಗರದ ಪಿಎಸ್ ಐ ಜಗದೀಶ್ ವೃತ್ತದಲ್ಲಿ ಪಿಎಸ್ ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಪಿಎಸ್ ಐ ಜಗದೀಶ್ ಅವರ 8ನೇ ವರ್ಷದ ಪುಣ್ಯಸ್ಮರಣೆಯನ್ನು ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಹಳ ಅವಿಸ್ಮರಣೀಯ ಕಾರ್ಯಕ್ರಮ ಇದು , ಜನರೊಂದಿಗೆ ಬೆರಯುವ ಪೊಲೀಸ್ ಅಧಿಕಾರಿಗಳನ್ನ ನೆನೆಯುವ ಪದ್ದತಿ ನಮ್ಮಲಿದೆ, ದೊಡ್ಡಬಳ್ಳಾಪುರದ ಜನ ಬಹಳ ವಿಶೇಷತೆಯನ್ನ ಹೊಂದಿದ್ದಾರೆ, ನಾನು 25 ವರ್ಷಗಳ ಸೇವೆಯಲ್ಲಿ ದೊಡ್ಡಬಳ್ಳಾಪುರದ ಜನತೆ ನೀಡುವ ಪ್ರೀತಿಯನ್ನ ನೋಡಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರ ಠಾಣೆ ಪಿಐ ಅಮರೇಶ ಗೌಡ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ, ಪೌರಾಯುಕ್ತ ಪರಮೇಶ್, ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ನಗರಸಭೆ ಸದಸ್ಯರಾದ ಇಂದ್ರಾಣಿ, ಆದಿಲಕ್ಷ್ಮಿ, ಮಲ್ಲೇಶ್, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಕೃಷ್ಣಪ್ಪ, ಕೃಷ್ಣಮೂರ್ತಿ ಇತರರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…