ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರದ ಬಸವೇಶ್ವರನಗರದ ನಿವಾಸಿ ಸುಷ್ಮಾ ಮಹೇಶ್ (24) ದುರಂತ ಸಾವಗೀಡಾದ ತುಂಬು ಗರ್ಭಿಣಿ.
ಆಕೆಗಿದು ಮೊದಲ ಮಗು, ಇನ್ನೇನು ಮನೆಗೆ ಹೊಸ ಅತಿಥಿಯ ಆಗಮನ ಆಗುತ್ತದೆ ಎಂದು ಕುಟುಂಬಸ್ಥರು ಖುಷಿ ಖುಷಿಯಾಗಿದ್ದರು. ಆದರೆ ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಎರಡು ಜೀವಗಳನ್ನ ಬಲಿ ಪಡೆದಿದೆ. ತಾಯಿ ಮತ್ತು ಮಗುವನ್ನ ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಆಸ್ಪತ್ರೆ ಅವರಣದಲ್ಲಿ ಮುಗಿಲು ಮುಟ್ಟಿದೆ.
ಮೃತ ಸುಷ್ಮಾಳನ್ನ ಬೆಂಗಳೂರಿನ ಮಹೇಶ್ ಎಂಬುವರಿಗೆ ಮದುವೆ ಮಾಡಿಕೊಡಲಾಗಿತ್ತು, ಚೊಚ್ಚಲ ಹೆರಿಗೆಗಾಗಿ ಆಕೆ ತವರು ಮನೆಯಾದ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆಯಲ್ಲಿ ರೆಗ್ಯೂಲರ್ ಚೆಕಪ್ ಮಾಡಿಸುತ್ತಿದ್ದರು. ಈಗಾಗಲೇ 9 ತಿಂಗಳು ತುಂಬಿದ ಹಿನ್ನಲೆ, ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ಸುಷ್ಮಾಳನ್ನ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಆಕೆಯನ್ನ ಪರೀಕ್ಷೆ ಮಾಡಿದ ವೈದ್ಯರು ಕೇವಲ ಒಂದು ಬಿಪಿ ಮಾತ್ರೆ ಕೊಟ್ಟು ಏನು ಆಗುವುದಿಲ್ಲ ಮನೆಗೆ ಹೋಗಿ ಎಂದು ಕಳಿಸಿದ್ದಾರೆ. ನನಗೆ ನೋವು ತಡೆಯಲಾಗುತ್ತಿಲ್ಲ ನನ್ನನ್ನು ಅಡ್ಮಿಟ್ ಮಾಡಿಕೊಳ್ಳಿ ಎಂದು ಬೇಡಿಕೊಂಡರು ವೈದ್ಯರು ಏನು ಆಗುವುದಿಲ್ಲ ನೋವು ತಡೆಯಬೇಕು ಎಂದು ಹೇಳಿ ಕಳಿಸಿದ್ದರು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.
ಇಂದು ಮುಂಜಾನೆ ಸಮಯದಲ್ಲಿ ನೋವು ತಾಳಲಾರದೆ ಸುಷ್ಮಾ ರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಾಗ ಯಾವುದೇ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಗಳು ಮತ್ತು ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಮೃತಳ ತಾಯಿ ಭಾಗ್ಯಮ್ಮ ಕಣ್ಣೀರು ಹಾಕಿದ್ದಾರೆ.
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…