ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರದ ಬಸವೇಶ್ವರನಗರದ ನಿವಾಸಿ ಸುಷ್ಮಾ ಮಹೇಶ್ (24) ದುರಂತ ಸಾವಗೀಡಾದ ತುಂಬು ಗರ್ಭಿಣಿ.
ಆಕೆಗಿದು ಮೊದಲ ಮಗು, ಇನ್ನೇನು ಮನೆಗೆ ಹೊಸ ಅತಿಥಿಯ ಆಗಮನ ಆಗುತ್ತದೆ ಎಂದು ಕುಟುಂಬಸ್ಥರು ಖುಷಿ ಖುಷಿಯಾಗಿದ್ದರು. ಆದರೆ ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಎರಡು ಜೀವಗಳನ್ನ ಬಲಿ ಪಡೆದಿದೆ. ತಾಯಿ ಮತ್ತು ಮಗುವನ್ನ ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಆಸ್ಪತ್ರೆ ಅವರಣದಲ್ಲಿ ಮುಗಿಲು ಮುಟ್ಟಿದೆ.
ಮೃತ ಸುಷ್ಮಾಳನ್ನ ಬೆಂಗಳೂರಿನ ಮಹೇಶ್ ಎಂಬುವರಿಗೆ ಮದುವೆ ಮಾಡಿಕೊಡಲಾಗಿತ್ತು, ಚೊಚ್ಚಲ ಹೆರಿಗೆಗಾಗಿ ಆಕೆ ತವರು ಮನೆಯಾದ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆಯಲ್ಲಿ ರೆಗ್ಯೂಲರ್ ಚೆಕಪ್ ಮಾಡಿಸುತ್ತಿದ್ದರು. ಈಗಾಗಲೇ 9 ತಿಂಗಳು ತುಂಬಿದ ಹಿನ್ನಲೆ, ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ಸುಷ್ಮಾಳನ್ನ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಆಕೆಯನ್ನ ಪರೀಕ್ಷೆ ಮಾಡಿದ ವೈದ್ಯರು ಕೇವಲ ಒಂದು ಬಿಪಿ ಮಾತ್ರೆ ಕೊಟ್ಟು ಏನು ಆಗುವುದಿಲ್ಲ ಮನೆಗೆ ಹೋಗಿ ಎಂದು ಕಳಿಸಿದ್ದಾರೆ. ನನಗೆ ನೋವು ತಡೆಯಲಾಗುತ್ತಿಲ್ಲ ನನ್ನನ್ನು ಅಡ್ಮಿಟ್ ಮಾಡಿಕೊಳ್ಳಿ ಎಂದು ಬೇಡಿಕೊಂಡರು ವೈದ್ಯರು ಏನು ಆಗುವುದಿಲ್ಲ ನೋವು ತಡೆಯಬೇಕು ಎಂದು ಹೇಳಿ ಕಳಿಸಿದ್ದರು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.
ಇಂದು ಮುಂಜಾನೆ ಸಮಯದಲ್ಲಿ ನೋವು ತಾಳಲಾರದೆ ಸುಷ್ಮಾ ರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಾಗ ಯಾವುದೇ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಗಳು ಮತ್ತು ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಮೃತಳ ತಾಯಿ ಭಾಗ್ಯಮ್ಮ ಕಣ್ಣೀರು ಹಾಕಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…