ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಗರ್ಭಿಣಿ ಸಾವು ಪ್ರಕರಣ: ಆಸ್ಪತ್ರೆಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭೇಟಿ,‌ ಪರಿಶೀಲನೆ

ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೊಡ್ಡಬಳ್ಳಾಪುರದ ಬಸವೇಶ್ವರನಗರದ ನಿವಾಸಿ ಸುಷ್ಮಾ ಮಹೇಶ್ (24) ದುರಂತ ಸಾವಗೀಡಾದ ತುಂಬು ಗರ್ಭಿಣಿ.

ಆಕೆಗಿದು ಮೊದಲ ಮಗು, ಇನ್ನೇನು ಮನೆಗೆ ಹೊಸ ಅತಿಥಿಯ ಆಗಮನ ಆಗುತ್ತದೆ ಎಂದು ಕುಟುಂಬಸ್ಥರು ಖುಷಿ ಖುಷಿಯಾಗಿದ್ದರು. ಆದರೆ ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಎರಡು ಜೀವಗಳನ್ನ ಬಲಿ ಪಡೆದಿದೆ. ತಾಯಿ ಮತ್ತು ಮಗುವನ್ನ ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಆಸ್ಪತ್ರೆ ಅವರಣದಲ್ಲಿ ಮುಗಿಲು ಮುಟ್ಟಿದೆ.

ಮೃತ ಸುಷ್ಮಾಳನ್ನ ಬೆಂಗಳೂರಿನ ಮಹೇಶ್ ಎಂಬುವರಿಗೆ ಮದುವೆ ಮಾಡಿಕೊಡಲಾಗಿತ್ತು, ಚೊಚ್ಚಲ ಹೆರಿಗೆಗಾಗಿ ಆಕೆ ತವರು ಮನೆಯಾದ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆಯಲ್ಲಿ ರೆಗ್ಯೂಲರ್ ಚೆಕಪ್ ಮಾಡಿಸುತ್ತಿದ್ದರು. ಈಗಾಗಲೇ 9 ತಿಂಗಳು ತುಂಬಿದ ಹಿನ್ನಲೆ, ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ಸುಷ್ಮಾಳನ್ನ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಆಕೆಯನ್ನ ಪರೀಕ್ಷೆ ಮಾಡಿದ ವೈದ್ಯರು ಕೇವಲ ಒಂದು ಬಿಪಿ ಮಾತ್ರೆ ಕೊಟ್ಟು ಏನು ಆಗುವುದಿಲ್ಲ ಮನೆಗೆ ಹೋಗಿ ಎಂದು ಕಳಿಸಿದ್ದಾರೆ. ನನಗೆ ನೋವು ತಡೆಯಲಾಗುತ್ತಿಲ್ಲ ನನ್ನನ್ನು ಅಡ್ಮಿಟ್ ಮಾಡಿಕೊಳ್ಳಿ ಎಂದು ಬೇಡಿಕೊಂಡರು ವೈದ್ಯರು ಏನು ಆಗುವುದಿಲ್ಲ ನೋವು ತಡೆಯಬೇಕು ಎಂದು ಹೇಳಿ ಕಳಿಸಿದ್ದರು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

ಇಂದು ಮುಂಜಾನೆ ಸಮಯದಲ್ಲಿ ನೋವು ತಾಳಲಾರದೆ ಸುಷ್ಮಾ ರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಾಗ ಯಾವುದೇ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಗಳು ಮತ್ತು ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಮೃತಳ ತಾಯಿ ಭಾಗ್ಯಮ್ಮ ಕಣ್ಣೀರು ಹಾಕಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

4 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

5 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

6 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

13 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago