ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರದ ಬಸವೇಶ್ವರನಗರದ ನಿವಾಸಿ ಸುಷ್ಮಾ ಮಹೇಶ್ (24) ದುರಂತ ಸಾವಗೀಡಾದ ತುಂಬು ಗರ್ಭಿಣಿ.
ಆಕೆಗಿದು ಮೊದಲ ಮಗು, ಇನ್ನೇನು ಮನೆಗೆ ಹೊಸ ಅತಿಥಿಯ ಆಗಮನ ಆಗುತ್ತದೆ ಎಂದು ಕುಟುಂಬಸ್ಥರು ಖುಷಿ ಖುಷಿಯಾಗಿದ್ದರು. ಆದರೆ ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಎರಡು ಜೀವಗಳನ್ನ ಬಲಿ ಪಡೆದಿದೆ. ತಾಯಿ ಮತ್ತು ಮಗುವನ್ನ ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಆಸ್ಪತ್ರೆ ಅವರಣದಲ್ಲಿ ಮುಗಿಲು ಮುಟ್ಟಿದೆ.
ಮೃತ ಸುಷ್ಮಾಳನ್ನ ಬೆಂಗಳೂರಿನ ಮಹೇಶ್ ಎಂಬುವರಿಗೆ ಮದುವೆ ಮಾಡಿಕೊಡಲಾಗಿತ್ತು, ಚೊಚ್ಚಲ ಹೆರಿಗೆಗಾಗಿ ಆಕೆ ತವರು ಮನೆಯಾದ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆಯಲ್ಲಿ ರೆಗ್ಯೂಲರ್ ಚೆಕಪ್ ಮಾಡಿಸುತ್ತಿದ್ದರು. ಈಗಾಗಲೇ 9 ತಿಂಗಳು ತುಂಬಿದ ಹಿನ್ನಲೆ, ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ಸುಷ್ಮಾಳನ್ನ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಆಕೆಯನ್ನ ಪರೀಕ್ಷೆ ಮಾಡಿದ ವೈದ್ಯರು ಕೇವಲ ಒಂದು ಬಿಪಿ ಮಾತ್ರೆ ಕೊಟ್ಟು ಏನು ಆಗುವುದಿಲ್ಲ ಮನೆಗೆ ಹೋಗಿ ಎಂದು ಕಳಿಸಿದ್ದಾರೆ. ನನಗೆ ನೋವು ತಡೆಯಲಾಗುತ್ತಿಲ್ಲ ನನ್ನನ್ನು ಅಡ್ಮಿಟ್ ಮಾಡಿಕೊಳ್ಳಿ ಎಂದು ಬೇಡಿಕೊಂಡರು ವೈದ್ಯರು ಏನು ಆಗುವುದಿಲ್ಲ ನೋವು ತಡೆಯಬೇಕು ಎಂದು ಹೇಳಿ ಕಳಿಸಿದ್ದರು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.
ಇಂದು ಮುಂಜಾನೆ ಸಮಯದಲ್ಲಿ ನೋವು ತಾಳಲಾರದೆ ಸುಷ್ಮಾ ರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಾಗ ಯಾವುದೇ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಗಳು ಮತ್ತು ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಮೃತಳ ತಾಯಿ ಭಾಗ್ಯಮ್ಮ ಕಣ್ಣೀರು ಹಾಕಿದ್ದಾರೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…