ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಧೀರಜ್ ಮುನಿರಾಜ್, ಯಾವುದೇ ಕಾರಣಕ್ಕೂ ತಾಲೂಕಿಗೆ ಮಂಜೂರಾಗಿರುವ ಜಿಲ್ಲಾಸ್ಪತ್ರೆ ಕೈ ತಪ್ಪಲ್ಲ. ತಾಲೂಕಿಗೆ ಜಿಲ್ಲಾಸ್ಪತ್ರೆ ಬೇಕು ಎನ್ನುವುದಕ್ಕೆ  ನಮ್ಮಲ್ಲಿ ಸಾಕಷ್ಟು ಅಂಶಗಳಿವೆ. ಈ ಕುರಿತಂತೆ ಇದೇ ತಿಂಗಳು 11ರಂದು ನಡೆಯಲಿರುವ ಸದನದಲ್ಲಿ  ಸವಿಸ್ತಾರವಾಗಿ ಆರೋಗ್ಯ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಿದ್ದೇನೆ ಎಂದು ಹೇಳಿದ್ದಾರೆ.

2019ರಲ್ಲಿ ನಗರದ ಸಿದ್ದೇನಾಯಕನಹಳ್ಳಿಯಲ್ಲಿ 9 ಎಕರೆ 38 ಗುಂಟೆ ಜಾಗದಲ್ಲಿ 195 ಕೋಟಿ ರೂ. ವೆಚ್ಚದ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. 2023ರಲ್ಲಿ ಆರೋಗ್ಯ ಇಲಾಖೆಯಿಂದ ಮಂಜೂರಾಗಿರುವ ಆಸ್ಪತ್ರೆಗೆ ಜಿಯೋ‌ ಮಾಡಿ, ಆರ್ಥಿಕ ಅನುಮೋದನೆ ನೀಡಲಾಗುತ್ತದೆ. ಇದನ್ನು ತಪ್ಪಿಸಲು ಯಾರೋ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸಿದ್ದರು. ಆದರೆ, ನಾನು ಜಿಲ್ಲಾಸ್ಪತ್ರೆ ಕೈತಪ್ಪಲು ಬಿಡೋದಿಲ್ಲ. ಇದಲ್ಲದೆ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಅಭಿಮ್ ಯೋಜನೆಯಡಿ 50 ಹಾಸಿಗೆಯುಳ್ಳ ಕ್ರಿಟಿಕಲ್ ಕೇರ್ ಯುನಿಟ್ ಆಸ್ಪತ್ರೆ ದೊಡ್ಡಬಳ್ಳಾಪುರದಲ್ಲಿ ಆಗಲಿದೆ ಎಂದರು.

ತಾಲೂಕಿನ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವುದು ನನ್ನ ಆದ್ಯ ಕರ್ತವ್ಯ. ನನ್ನನ್ನು ನಂಬಿ ತಾಲೂಕಿನ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಸೇವೆಗೆಂದು ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ ಎಂದರು.

ಜಿಲ್ಲಾಸ್ಪತ್ರೆ ತಾಲೂಕಿಗೆ ತರಬೇಕೆಂಬ ಮುಖ್ಯ ಉದ್ದೇಶದಿಂದ  ಪ್ರಧಾನಮಂತ್ರಿ ಅಭಿಮ್( ABHIM), (ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಮಿಷನ್ ) ಯೋಜನೆ ಅಡಿಯಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ (CCU) ನಿರ್ಮಾಣಕ್ಕೆ ಮುಂದಾಗಿದ್ದೇವೆ. ಈ ಕಾರಣ ಕ್ರಿಟಿಕಲ್ ಕೇರ್ ಯೂನಿಟ್ ಗಳು ಜಿಲ್ಲಾಸ್ಪತ್ರೆಯಲ್ಲಿ ಇರಬೇಕೆಂಬ ನಿಯಮವಿದೆ. ಅಂತೇಯೇ ಪ್ರಧಾನ ಮಂತ್ರಿ ಅಭಿಮ್( ABHIM) ಯೋಜನೆ ಅಡಿಯಲ್ಲಿ  ಜಿಲ್ಲಾಸ್ಪತ್ರೆ ಜಾಗದಲ್ಲಿ ಸಿಸಿಯು ನಿರ್ಮಾಣ ಮಾಡುವುದರಿಂದ ಜಿಲ್ಲಾಸ್ಪತ್ರೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕ್ರಿಟಿಕಲ್ ಕೇರ್ ಯೂನಿಟ್ ನ್ನು ನಿರ್ಮಾಣ ಮಾಡುವ ಸಲುವಾಗಿ  ಕೇಂದ್ರದ  ಅನುದಾನಕ್ಕೆ ಮುಂದಾಗಿದ್ದೇವೆ ಎಂದರು.

ತಾಲೂಕಿನ ಜನತೆಯಲ್ಲಿ ಗೊಂದಲ ಬೇಡ ತಾಯಿ ಮತ್ತು ಮಗು ಆಸ್ಪತ್ರೆ (ತಾಲೂಕು ಸಾರ್ವಜನಿಕ ಆಸ್ಪತ್ರೆ) ಬೇರೆ, ಜಿಲ್ಲಾಸ್ಪತ್ರೆ ಬೇರೆ. ತಾಲೂಕಿನಾದ್ಯಂತ ಹರಿದಾಡುತ್ತಿರುವ  ಗಾಳಿ ಸುದ್ದಿಗೆ ಕಿವಿಗೊಡಬೇಡಿ. ಜಿಲ್ಲಾಸ್ಪತ್ರೆ ಕೈ ತಪ್ಪಿಲ್ಲ , ನಮ್ಮ ತಾಲೂಕಿಗೆ ಜಿಲ್ಲಾಸ್ಪತ್ರೆ ಬರುವುದು ಖಚಿತ ಎಂದು  ತಿಳಿಸಿದ್ದಾರೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

17 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

20 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

20 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago