ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಧೀರಜ್ ಮುನಿರಾಜ್, ಯಾವುದೇ ಕಾರಣಕ್ಕೂ ತಾಲೂಕಿಗೆ ಮಂಜೂರಾಗಿರುವ ಜಿಲ್ಲಾಸ್ಪತ್ರೆ ಕೈ ತಪ್ಪಲ್ಲ. ತಾಲೂಕಿಗೆ ಜಿಲ್ಲಾಸ್ಪತ್ರೆ ಬೇಕು ಎನ್ನುವುದಕ್ಕೆ  ನಮ್ಮಲ್ಲಿ ಸಾಕಷ್ಟು ಅಂಶಗಳಿವೆ. ಈ ಕುರಿತಂತೆ ಇದೇ ತಿಂಗಳು 11ರಂದು ನಡೆಯಲಿರುವ ಸದನದಲ್ಲಿ  ಸವಿಸ್ತಾರವಾಗಿ ಆರೋಗ್ಯ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಿದ್ದೇನೆ ಎಂದು ಹೇಳಿದ್ದಾರೆ.

2019ರಲ್ಲಿ ನಗರದ ಸಿದ್ದೇನಾಯಕನಹಳ್ಳಿಯಲ್ಲಿ 9 ಎಕರೆ 38 ಗುಂಟೆ ಜಾಗದಲ್ಲಿ 195 ಕೋಟಿ ರೂ. ವೆಚ್ಚದ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. 2023ರಲ್ಲಿ ಆರೋಗ್ಯ ಇಲಾಖೆಯಿಂದ ಮಂಜೂರಾಗಿರುವ ಆಸ್ಪತ್ರೆಗೆ ಜಿಯೋ‌ ಮಾಡಿ, ಆರ್ಥಿಕ ಅನುಮೋದನೆ ನೀಡಲಾಗುತ್ತದೆ. ಇದನ್ನು ತಪ್ಪಿಸಲು ಯಾರೋ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸಿದ್ದರು. ಆದರೆ, ನಾನು ಜಿಲ್ಲಾಸ್ಪತ್ರೆ ಕೈತಪ್ಪಲು ಬಿಡೋದಿಲ್ಲ. ಇದಲ್ಲದೆ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಅಭಿಮ್ ಯೋಜನೆಯಡಿ 50 ಹಾಸಿಗೆಯುಳ್ಳ ಕ್ರಿಟಿಕಲ್ ಕೇರ್ ಯುನಿಟ್ ಆಸ್ಪತ್ರೆ ದೊಡ್ಡಬಳ್ಳಾಪುರದಲ್ಲಿ ಆಗಲಿದೆ ಎಂದರು.

ತಾಲೂಕಿನ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವುದು ನನ್ನ ಆದ್ಯ ಕರ್ತವ್ಯ. ನನ್ನನ್ನು ನಂಬಿ ತಾಲೂಕಿನ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಸೇವೆಗೆಂದು ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ ಎಂದರು.

ಜಿಲ್ಲಾಸ್ಪತ್ರೆ ತಾಲೂಕಿಗೆ ತರಬೇಕೆಂಬ ಮುಖ್ಯ ಉದ್ದೇಶದಿಂದ  ಪ್ರಧಾನಮಂತ್ರಿ ಅಭಿಮ್( ABHIM), (ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಮಿಷನ್ ) ಯೋಜನೆ ಅಡಿಯಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ (CCU) ನಿರ್ಮಾಣಕ್ಕೆ ಮುಂದಾಗಿದ್ದೇವೆ. ಈ ಕಾರಣ ಕ್ರಿಟಿಕಲ್ ಕೇರ್ ಯೂನಿಟ್ ಗಳು ಜಿಲ್ಲಾಸ್ಪತ್ರೆಯಲ್ಲಿ ಇರಬೇಕೆಂಬ ನಿಯಮವಿದೆ. ಅಂತೇಯೇ ಪ್ರಧಾನ ಮಂತ್ರಿ ಅಭಿಮ್( ABHIM) ಯೋಜನೆ ಅಡಿಯಲ್ಲಿ  ಜಿಲ್ಲಾಸ್ಪತ್ರೆ ಜಾಗದಲ್ಲಿ ಸಿಸಿಯು ನಿರ್ಮಾಣ ಮಾಡುವುದರಿಂದ ಜಿಲ್ಲಾಸ್ಪತ್ರೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕ್ರಿಟಿಕಲ್ ಕೇರ್ ಯೂನಿಟ್ ನ್ನು ನಿರ್ಮಾಣ ಮಾಡುವ ಸಲುವಾಗಿ  ಕೇಂದ್ರದ  ಅನುದಾನಕ್ಕೆ ಮುಂದಾಗಿದ್ದೇವೆ ಎಂದರು.

ತಾಲೂಕಿನ ಜನತೆಯಲ್ಲಿ ಗೊಂದಲ ಬೇಡ ತಾಯಿ ಮತ್ತು ಮಗು ಆಸ್ಪತ್ರೆ (ತಾಲೂಕು ಸಾರ್ವಜನಿಕ ಆಸ್ಪತ್ರೆ) ಬೇರೆ, ಜಿಲ್ಲಾಸ್ಪತ್ರೆ ಬೇರೆ. ತಾಲೂಕಿನಾದ್ಯಂತ ಹರಿದಾಡುತ್ತಿರುವ  ಗಾಳಿ ಸುದ್ದಿಗೆ ಕಿವಿಗೊಡಬೇಡಿ. ಜಿಲ್ಲಾಸ್ಪತ್ರೆ ಕೈ ತಪ್ಪಿಲ್ಲ , ನಮ್ಮ ತಾಲೂಕಿಗೆ ಜಿಲ್ಲಾಸ್ಪತ್ರೆ ಬರುವುದು ಖಚಿತ ಎಂದು  ತಿಳಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 minutes ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

50 minutes ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

2 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

10 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago