ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಧೀರಜ್ ಮುನಿರಾಜ್, ಯಾವುದೇ ಕಾರಣಕ್ಕೂ ತಾಲೂಕಿಗೆ ಮಂಜೂರಾಗಿರುವ ಜಿಲ್ಲಾಸ್ಪತ್ರೆ ಕೈ ತಪ್ಪಲ್ಲ. ತಾಲೂಕಿಗೆ ಜಿಲ್ಲಾಸ್ಪತ್ರೆ ಬೇಕು ಎನ್ನುವುದಕ್ಕೆ  ನಮ್ಮಲ್ಲಿ ಸಾಕಷ್ಟು ಅಂಶಗಳಿವೆ. ಈ ಕುರಿತಂತೆ ಇದೇ ತಿಂಗಳು 11ರಂದು ನಡೆಯಲಿರುವ ಸದನದಲ್ಲಿ  ಸವಿಸ್ತಾರವಾಗಿ ಆರೋಗ್ಯ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಿದ್ದೇನೆ ಎಂದು ಹೇಳಿದ್ದಾರೆ.

2019ರಲ್ಲಿ ನಗರದ ಸಿದ್ದೇನಾಯಕನಹಳ್ಳಿಯಲ್ಲಿ 9 ಎಕರೆ 38 ಗುಂಟೆ ಜಾಗದಲ್ಲಿ 195 ಕೋಟಿ ರೂ. ವೆಚ್ಚದ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. 2023ರಲ್ಲಿ ಆರೋಗ್ಯ ಇಲಾಖೆಯಿಂದ ಮಂಜೂರಾಗಿರುವ ಆಸ್ಪತ್ರೆಗೆ ಜಿಯೋ‌ ಮಾಡಿ, ಆರ್ಥಿಕ ಅನುಮೋದನೆ ನೀಡಲಾಗುತ್ತದೆ. ಇದನ್ನು ತಪ್ಪಿಸಲು ಯಾರೋ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸಿದ್ದರು. ಆದರೆ, ನಾನು ಜಿಲ್ಲಾಸ್ಪತ್ರೆ ಕೈತಪ್ಪಲು ಬಿಡೋದಿಲ್ಲ. ಇದಲ್ಲದೆ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಅಭಿಮ್ ಯೋಜನೆಯಡಿ 50 ಹಾಸಿಗೆಯುಳ್ಳ ಕ್ರಿಟಿಕಲ್ ಕೇರ್ ಯುನಿಟ್ ಆಸ್ಪತ್ರೆ ದೊಡ್ಡಬಳ್ಳಾಪುರದಲ್ಲಿ ಆಗಲಿದೆ ಎಂದರು.

ತಾಲೂಕಿನ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವುದು ನನ್ನ ಆದ್ಯ ಕರ್ತವ್ಯ. ನನ್ನನ್ನು ನಂಬಿ ತಾಲೂಕಿನ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಸೇವೆಗೆಂದು ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ ಎಂದರು.

ಜಿಲ್ಲಾಸ್ಪತ್ರೆ ತಾಲೂಕಿಗೆ ತರಬೇಕೆಂಬ ಮುಖ್ಯ ಉದ್ದೇಶದಿಂದ  ಪ್ರಧಾನಮಂತ್ರಿ ಅಭಿಮ್( ABHIM), (ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಮಿಷನ್ ) ಯೋಜನೆ ಅಡಿಯಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ (CCU) ನಿರ್ಮಾಣಕ್ಕೆ ಮುಂದಾಗಿದ್ದೇವೆ. ಈ ಕಾರಣ ಕ್ರಿಟಿಕಲ್ ಕೇರ್ ಯೂನಿಟ್ ಗಳು ಜಿಲ್ಲಾಸ್ಪತ್ರೆಯಲ್ಲಿ ಇರಬೇಕೆಂಬ ನಿಯಮವಿದೆ. ಅಂತೇಯೇ ಪ್ರಧಾನ ಮಂತ್ರಿ ಅಭಿಮ್( ABHIM) ಯೋಜನೆ ಅಡಿಯಲ್ಲಿ  ಜಿಲ್ಲಾಸ್ಪತ್ರೆ ಜಾಗದಲ್ಲಿ ಸಿಸಿಯು ನಿರ್ಮಾಣ ಮಾಡುವುದರಿಂದ ಜಿಲ್ಲಾಸ್ಪತ್ರೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕ್ರಿಟಿಕಲ್ ಕೇರ್ ಯೂನಿಟ್ ನ್ನು ನಿರ್ಮಾಣ ಮಾಡುವ ಸಲುವಾಗಿ  ಕೇಂದ್ರದ  ಅನುದಾನಕ್ಕೆ ಮುಂದಾಗಿದ್ದೇವೆ ಎಂದರು.

ತಾಲೂಕಿನ ಜನತೆಯಲ್ಲಿ ಗೊಂದಲ ಬೇಡ ತಾಯಿ ಮತ್ತು ಮಗು ಆಸ್ಪತ್ರೆ (ತಾಲೂಕು ಸಾರ್ವಜನಿಕ ಆಸ್ಪತ್ರೆ) ಬೇರೆ, ಜಿಲ್ಲಾಸ್ಪತ್ರೆ ಬೇರೆ. ತಾಲೂಕಿನಾದ್ಯಂತ ಹರಿದಾಡುತ್ತಿರುವ  ಗಾಳಿ ಸುದ್ದಿಗೆ ಕಿವಿಗೊಡಬೇಡಿ. ಜಿಲ್ಲಾಸ್ಪತ್ರೆ ಕೈ ತಪ್ಪಿಲ್ಲ , ನಮ್ಮ ತಾಲೂಕಿಗೆ ಜಿಲ್ಲಾಸ್ಪತ್ರೆ ಬರುವುದು ಖಚಿತ ಎಂದು  ತಿಳಿಸಿದ್ದಾರೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

2 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago