ದೊಡ್ಡಬಳ್ಳಾಪುರ ತಾಲೂಕಿನ ಎಸ್ಎಸ್ಎಲ್ ಸಿ ಟಾಪರ್ ವಿನಯ್ ಪ್ರಕಾಶ್

2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625‌ ಅಂಕಗಳಿಗೆ 618 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ದೇವಲ ಮಹರ್ಷಿ ಶಾಲಾ ವಿದ್ಯಾರ್ಥಿ ವಿನಯ ಪ್ರಕಾಶ್.

ಮೇ.8ರಂದು‌ 2023ರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಪಾತ್ರನಾಗಿರುವ ವಿನಯ್ ಪ್ರಕಾಶ್.

ವಿನಯ್ ಇಷ್ಟಪಟ್ಟು ಅಭ್ಯಾಸ ಮಾಡಿ ತಾಲೂಕಿಗೆ ಒಳ್ಳೆ ಫಲಿತಾಂಶ ತಂದಿರುವುದು ಸಂತಸ ತಂದಿದೆ. ಮನೆಯಲ್ಲಿ ನಾವು ಓದು ಎಂದು ಎಂದೂ ಒತ್ತಡ ಹೇರಲಿಲ್ಲ. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು‌ ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ‌ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾನೆ ಎಂದು ಟಾಪರ್ ವಿನಯ್ ಪ್ರಕಾಶ್ ತಂದೆ ಪ್ರಕಾಶ್ ಮಗನ‌ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.

ನಂತರ ಟಾಪರ್ ವಿನಯ್ ಪ್ರಕಾಶ್ ಮಾತನಾಡಿ, ಈ ಸಾಧನೆಗೆ ನನ್ನ ಶಿಕ್ಷಕರು, ಪೋಷಕರು ಕಾರಣ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಇನ್ನೂ ಹೆಚ್ಚು ಅಂಕ ಬರಬಹುದು ಎಂದು ನಿರೀಕ್ಷಿಸಿದ್ದೆ‌ ಆದರೆ 618 ಅಂಕ‌ ಬಂದಿರುವುದು ಖುಷಿಕೊಟ್ಟಿದೆ, ಮುಂದಿನ‌ ವಿದ್ಯಾಭ್ಯಾಸದಲ್ಲಿ ಇನ್ನೂ ಕಠಿಣ ಪರಿಶ್ರಮದಿಂದ ಹೆಚ್ಚು ಅಂಕ ಪಡೆಯಲು ಪ್ರಯತ್ನಿಸುವೆ ಎಂದು‌ ತಿಳಿಸಿದರು.

ಭವಿಷ್ಯದಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಮಾಡುವ ಬಯಕೆ ಇದೆ, ಈ‌ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮಾಡುತ್ತೇನೆ, ಓದುವ ಜೊತೆ ಪೆನ್ಸಿಲ್ ಸ್ಕೆಚ್, ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುತ್ತೇನೆ ಎಂದರು.

ಮಗನ‌‌ ಈ ಸಾಧನೆಗೆ ಆನಂದದಲ್ಲಿ ಮಿಂದೆದ್ದ ಪೋಷಕರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

4 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

11 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

14 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

14 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago