2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625 ಅಂಕಗಳಿಗೆ 618 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ದೇವಲ ಮಹರ್ಷಿ ಶಾಲಾ ವಿದ್ಯಾರ್ಥಿ ವಿನಯ ಪ್ರಕಾಶ್.
ಮೇ.8ರಂದು 2023ರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಪಾತ್ರನಾಗಿರುವ ವಿನಯ್ ಪ್ರಕಾಶ್.
ವಿನಯ್ ಇಷ್ಟಪಟ್ಟು ಅಭ್ಯಾಸ ಮಾಡಿ ತಾಲೂಕಿಗೆ ಒಳ್ಳೆ ಫಲಿತಾಂಶ ತಂದಿರುವುದು ಸಂತಸ ತಂದಿದೆ. ಮನೆಯಲ್ಲಿ ನಾವು ಓದು ಎಂದು ಎಂದೂ ಒತ್ತಡ ಹೇರಲಿಲ್ಲ. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾನೆ ಎಂದು ಟಾಪರ್ ವಿನಯ್ ಪ್ರಕಾಶ್ ತಂದೆ ಪ್ರಕಾಶ್ ಮಗನ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.
ನಂತರ ಟಾಪರ್ ವಿನಯ್ ಪ್ರಕಾಶ್ ಮಾತನಾಡಿ, ಈ ಸಾಧನೆಗೆ ನನ್ನ ಶಿಕ್ಷಕರು, ಪೋಷಕರು ಕಾರಣ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಇನ್ನೂ ಹೆಚ್ಚು ಅಂಕ ಬರಬಹುದು ಎಂದು ನಿರೀಕ್ಷಿಸಿದ್ದೆ ಆದರೆ 618 ಅಂಕ ಬಂದಿರುವುದು ಖುಷಿಕೊಟ್ಟಿದೆ, ಮುಂದಿನ ವಿದ್ಯಾಭ್ಯಾಸದಲ್ಲಿ ಇನ್ನೂ ಕಠಿಣ ಪರಿಶ್ರಮದಿಂದ ಹೆಚ್ಚು ಅಂಕ ಪಡೆಯಲು ಪ್ರಯತ್ನಿಸುವೆ ಎಂದು ತಿಳಿಸಿದರು.
ಭವಿಷ್ಯದಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಮಾಡುವ ಬಯಕೆ ಇದೆ, ಈ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮಾಡುತ್ತೇನೆ, ಓದುವ ಜೊತೆ ಪೆನ್ಸಿಲ್ ಸ್ಕೆಚ್, ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುತ್ತೇನೆ ಎಂದರು.
ಮಗನ ಈ ಸಾಧನೆಗೆ ಆನಂದದಲ್ಲಿ ಮಿಂದೆದ್ದ ಪೋಷಕರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…