ದೊಡ್ಡಬಳ್ಳಾಪುರ ತಾಲೂಕಿನ ಎಸ್ಎಸ್ಎಲ್ ಸಿ ಟಾಪರ್ ವಿನಯ್ ಪ್ರಕಾಶ್

2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625‌ ಅಂಕಗಳಿಗೆ 618 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ದೇವಲ ಮಹರ್ಷಿ ಶಾಲಾ ವಿದ್ಯಾರ್ಥಿ ವಿನಯ ಪ್ರಕಾಶ್.

ಮೇ.8ರಂದು‌ 2023ರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಪಾತ್ರನಾಗಿರುವ ವಿನಯ್ ಪ್ರಕಾಶ್.

ವಿನಯ್ ಇಷ್ಟಪಟ್ಟು ಅಭ್ಯಾಸ ಮಾಡಿ ತಾಲೂಕಿಗೆ ಒಳ್ಳೆ ಫಲಿತಾಂಶ ತಂದಿರುವುದು ಸಂತಸ ತಂದಿದೆ. ಮನೆಯಲ್ಲಿ ನಾವು ಓದು ಎಂದು ಎಂದೂ ಒತ್ತಡ ಹೇರಲಿಲ್ಲ. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು‌ ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ‌ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾನೆ ಎಂದು ಟಾಪರ್ ವಿನಯ್ ಪ್ರಕಾಶ್ ತಂದೆ ಪ್ರಕಾಶ್ ಮಗನ‌ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.

ನಂತರ ಟಾಪರ್ ವಿನಯ್ ಪ್ರಕಾಶ್ ಮಾತನಾಡಿ, ಈ ಸಾಧನೆಗೆ ನನ್ನ ಶಿಕ್ಷಕರು, ಪೋಷಕರು ಕಾರಣ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಇನ್ನೂ ಹೆಚ್ಚು ಅಂಕ ಬರಬಹುದು ಎಂದು ನಿರೀಕ್ಷಿಸಿದ್ದೆ‌ ಆದರೆ 618 ಅಂಕ‌ ಬಂದಿರುವುದು ಖುಷಿಕೊಟ್ಟಿದೆ, ಮುಂದಿನ‌ ವಿದ್ಯಾಭ್ಯಾಸದಲ್ಲಿ ಇನ್ನೂ ಕಠಿಣ ಪರಿಶ್ರಮದಿಂದ ಹೆಚ್ಚು ಅಂಕ ಪಡೆಯಲು ಪ್ರಯತ್ನಿಸುವೆ ಎಂದು‌ ತಿಳಿಸಿದರು.

ಭವಿಷ್ಯದಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಮಾಡುವ ಬಯಕೆ ಇದೆ, ಈ‌ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮಾಡುತ್ತೇನೆ, ಓದುವ ಜೊತೆ ಪೆನ್ಸಿಲ್ ಸ್ಕೆಚ್, ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುತ್ತೇನೆ ಎಂದರು.

ಮಗನ‌‌ ಈ ಸಾಧನೆಗೆ ಆನಂದದಲ್ಲಿ ಮಿಂದೆದ್ದ ಪೋಷಕರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

19 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago