2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625 ಅಂಕಗಳಿಗೆ 618 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ದೇವಲ ಮಹರ್ಷಿ ಶಾಲಾ ವಿದ್ಯಾರ್ಥಿ ವಿನಯ ಪ್ರಕಾಶ್.
ಮೇ.8ರಂದು 2023ರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಪಾತ್ರನಾಗಿರುವ ವಿನಯ್ ಪ್ರಕಾಶ್.
ವಿನಯ್ ಇಷ್ಟಪಟ್ಟು ಅಭ್ಯಾಸ ಮಾಡಿ ತಾಲೂಕಿಗೆ ಒಳ್ಳೆ ಫಲಿತಾಂಶ ತಂದಿರುವುದು ಸಂತಸ ತಂದಿದೆ. ಮನೆಯಲ್ಲಿ ನಾವು ಓದು ಎಂದು ಎಂದೂ ಒತ್ತಡ ಹೇರಲಿಲ್ಲ. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾನೆ ಎಂದು ಟಾಪರ್ ವಿನಯ್ ಪ್ರಕಾಶ್ ತಂದೆ ಪ್ರಕಾಶ್ ಮಗನ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.
ನಂತರ ಟಾಪರ್ ವಿನಯ್ ಪ್ರಕಾಶ್ ಮಾತನಾಡಿ, ಈ ಸಾಧನೆಗೆ ನನ್ನ ಶಿಕ್ಷಕರು, ಪೋಷಕರು ಕಾರಣ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಇನ್ನೂ ಹೆಚ್ಚು ಅಂಕ ಬರಬಹುದು ಎಂದು ನಿರೀಕ್ಷಿಸಿದ್ದೆ ಆದರೆ 618 ಅಂಕ ಬಂದಿರುವುದು ಖುಷಿಕೊಟ್ಟಿದೆ, ಮುಂದಿನ ವಿದ್ಯಾಭ್ಯಾಸದಲ್ಲಿ ಇನ್ನೂ ಕಠಿಣ ಪರಿಶ್ರಮದಿಂದ ಹೆಚ್ಚು ಅಂಕ ಪಡೆಯಲು ಪ್ರಯತ್ನಿಸುವೆ ಎಂದು ತಿಳಿಸಿದರು.
ಭವಿಷ್ಯದಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಮಾಡುವ ಬಯಕೆ ಇದೆ, ಈ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮಾಡುತ್ತೇನೆ, ಓದುವ ಜೊತೆ ಪೆನ್ಸಿಲ್ ಸ್ಕೆಚ್, ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುತ್ತೇನೆ ಎಂದರು.
ಮಗನ ಈ ಸಾಧನೆಗೆ ಆನಂದದಲ್ಲಿ ಮಿಂದೆದ್ದ ಪೋಷಕರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…