ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಕೆಲ ವಾರ್ಡ್ ಗಳನ್ನು ಭೇಟಿ ಮಾಡಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿದರು. ಕೆಲ ರೋಗಿಗಳನ್ನು ಮಾತನಾಡಿಸಿ ವೈದ್ಯಕೀಯ ಸೇವೆಗಳು ಯಾವ ರೀತಿಯಾಗಿ ಬಡವರಿಗೆ ಸಿಗುತ್ತಿದೆ ಎಂದು ರೋಗಿಗಳಲ್ಲಿ ಮಾಹಿತಿ ಕೇಳಿದರು ಜೊತೆಗೆ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಮತ್ತು ಅವರಿಗೆ ಔಷಧಿಗಳು ಸರಿಯಾದ ರೀತಿ ಸಕಲಾಕ್ಕೆ ಸಿಗುತ್ತಿವೇಯೇ ಎಂಬುದನ್ನು ಪರಿಶೀಲಿಸಿ ರೋಗಿಗಳಿಗೆ ಯಾವುದೇ ರೀತಿಯ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.
ಹೆರಿಗೆಯಾದ ಮಹಿಳೆಯರ ವಾರ್ಡ್ ಪರಿಶೀಲಿಸಿ ತಾಯಿ ಮತ್ತು ಮಗುವಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಸಿಗುತ್ತಿದೇಯೆ ಮತ್ತು ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯ ಸಕಲಕ್ಕೆ ಸಿಗುತ್ತೆದೇಯೆ ಎಂಬುದರ ಬಗ್ಗೆ ಮಾಹಿತಿ ಪಡೆದರು. ಮಹಿಳೆಯರಿಗೆ ವಿಶೇಷ ಕಾಳಜಿ ವಹಿಸುವ ಮೂಲಕ ಮಹಿಳಾ ಆರೋಗ್ಯದ ಕಡೆಗೆ ಗಮನ ಹರಿಸಿ. ಬಡವರಿಗೆ ಗುಣಮಟ್ಟದ ಆರೋಗ್ಯ ದೊರೆಯುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಗರ್ಭಿಣಿ ಮತ್ತು ತಾಯಿಂದಿರಿಗೆ ಪ್ರೋತ್ಸಾಹಧನದ ಸೌಲಭ್ಯ ಕಲ್ಪಿಸಬೇಕು. ಕೆಲವರಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಇರುವುದಿಲ್ಲ ಅದಕ್ಕಾಗಿ ಅಂಗನವಾಡಿಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆರು ಗರ್ಭಿಣಿಯ ಮನೆಗೆ ತೆರಳಿದಾಗ ಸೌಲಭ್ಯಗಳ ಮಾಹಿತಿ ನೀಡಬೇಕು ಹಾಗೂ ತಾಯಿಂದಿರಿಗೆ ಆಸ್ಪತ್ರೆಯಲ್ಲಿ ತಾಯಿ ಕಾರ್ಡ್ ವಿತರಿಸುವಾಗ ಮಾಹಿತಿ ನೀಡುವಂತೆ ತಿಳಿಸಿದರು. ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಇದರ ಬಗ್ಗೆ ಅರಿವು ಮೂಡಿಸಲು ತಿಳಿಸಿದರು.
ಆಸ್ಪತ್ರೆಯಲ್ಲಿನ ರೋಗಿಗಳಿಗೆ ಬಳಸುತ್ತಿರುವ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ನೀರಿನ ಗುಣಮಟ್ಟ ಪರೀಕ್ಷೆಯ ವಿವರವನ್ನು ತಿಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗೆ ಬರುವವರು ಬಹುತೇಕರು ಬಡವರು ಇರುತ್ತಾರೆ. ಅವರಿಗೆ ಸೌಲಭ್ಯಗಳ ಕೊರತೆಯಾಗಬಾರದು. ಬೇರಡೆ ಶಿಫಾರಸು ಮಾಡಬಾರದು. ಇಲ್ಲಿಯೇ ಸೌಲಭ್ಯಕ್ಕೆ ನೀಡಲು ಪ್ರಯತ್ನಿಸಬೇಕು ಎಂದರು
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ತಹಶೀಲ್ದಾರ್ ಅದ ವಿದ್ಯಾ ವಿಭಾ ರಾಥೊಡ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮುದ್ದಣ, ಸಿ.ಎಮ್.ಒ ಆದ ಡಾ.ಪಿ.ಎಸ್ ರಮೇಶ್. ಟಿ.ಎಚ್.ಒ ಆದ ಡಾ. ಶಾರದ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…