ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಕೆಲ ವಾರ್ಡ್ ಗಳನ್ನು ಭೇಟಿ ಮಾಡಿ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿದರು. ಕೆಲ ರೋಗಿಗಳನ್ನು ಮಾತನಾಡಿಸಿ ವೈದ್ಯಕೀಯ ಸೇವೆಗಳು ಯಾವ ರೀತಿಯಾಗಿ ಬಡವರಿಗೆ ಸಿಗುತ್ತಿದೆ ಎಂದು ರೋಗಿಗಳಲ್ಲಿ ಮಾಹಿತಿ ಕೇಳಿದರು ಜೊತೆಗೆ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಮತ್ತು ಅವರಿಗೆ ಔಷಧಿಗಳು ಸರಿಯಾದ ರೀತಿ ಸಕಲಾಕ್ಕೆ ಸಿಗುತ್ತಿವೇಯೇ ಎಂಬುದನ್ನು ಪರಿಶೀಲಿಸಿ ರೋಗಿಗಳಿಗೆ ಯಾವುದೇ ರೀತಿಯ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.
ಹೆರಿಗೆಯಾದ ಮಹಿಳೆಯರ ವಾರ್ಡ್ ಪರಿಶೀಲಿಸಿ ತಾಯಿ ಮತ್ತು ಮಗುವಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಸಿಗುತ್ತಿದೇಯೆ ಮತ್ತು ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯ ಸಕಲಕ್ಕೆ ಸಿಗುತ್ತೆದೇಯೆ ಎಂಬುದರ ಬಗ್ಗೆ ಮಾಹಿತಿ ಪಡೆದರು. ಮಹಿಳೆಯರಿಗೆ ವಿಶೇಷ ಕಾಳಜಿ ವಹಿಸುವ ಮೂಲಕ ಮಹಿಳಾ ಆರೋಗ್ಯದ ಕಡೆಗೆ ಗಮನ ಹರಿಸಿ. ಬಡವರಿಗೆ ಗುಣಮಟ್ಟದ ಆರೋಗ್ಯ ದೊರೆಯುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಗರ್ಭಿಣಿ ಮತ್ತು ತಾಯಿಂದಿರಿಗೆ ಪ್ರೋತ್ಸಾಹಧನದ ಸೌಲಭ್ಯ ಕಲ್ಪಿಸಬೇಕು. ಕೆಲವರಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಇರುವುದಿಲ್ಲ ಅದಕ್ಕಾಗಿ ಅಂಗನವಾಡಿಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆರು ಗರ್ಭಿಣಿಯ ಮನೆಗೆ ತೆರಳಿದಾಗ ಸೌಲಭ್ಯಗಳ ಮಾಹಿತಿ ನೀಡಬೇಕು ಹಾಗೂ ತಾಯಿಂದಿರಿಗೆ ಆಸ್ಪತ್ರೆಯಲ್ಲಿ ತಾಯಿ ಕಾರ್ಡ್ ವಿತರಿಸುವಾಗ ಮಾಹಿತಿ ನೀಡುವಂತೆ ತಿಳಿಸಿದರು. ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಇದರ ಬಗ್ಗೆ ಅರಿವು ಮೂಡಿಸಲು ತಿಳಿಸಿದರು.
ಆಸ್ಪತ್ರೆಯಲ್ಲಿನ ರೋಗಿಗಳಿಗೆ ಬಳಸುತ್ತಿರುವ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ನೀರಿನ ಗುಣಮಟ್ಟ ಪರೀಕ್ಷೆಯ ವಿವರವನ್ನು ತಿಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗೆ ಬರುವವರು ಬಹುತೇಕರು ಬಡವರು ಇರುತ್ತಾರೆ. ಅವರಿಗೆ ಸೌಲಭ್ಯಗಳ ಕೊರತೆಯಾಗಬಾರದು. ಬೇರಡೆ ಶಿಫಾರಸು ಮಾಡಬಾರದು. ಇಲ್ಲಿಯೇ ಸೌಲಭ್ಯಕ್ಕೆ ನೀಡಲು ಪ್ರಯತ್ನಿಸಬೇಕು ಎಂದರು
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ತಹಶೀಲ್ದಾರ್ ಅದ ವಿದ್ಯಾ ವಿಭಾ ರಾಥೊಡ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮುದ್ದಣ, ಸಿ.ಎಮ್.ಒ ಆದ ಡಾ.ಪಿ.ಎಸ್ ರಮೇಶ್. ಟಿ.ಎಚ್.ಒ ಆದ ಡಾ. ಶಾರದ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…