ದೊಡ್ಡಬಳ್ಳಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ ಡಿ ಉಪ್ಪಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಇವರೊಂದಿಗೆ ಉಪಾಧ್ಯಕ್ಷರನ್ನಾಗಿ ಕೊತ್ತೂರಪ್ಪ, ಜೆ.ಮುನಿರಾಜು, ಎಂ. ಮುನಿಸ್ವಾಮಿ ಆಯ್ಕೆಗೊಂಡರೆ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಪ್ಪ, ಕಾರ್ಯದರ್ಶಿ ಪುರುಷೋತ್ತಮ ಗೌಡ, ಪುರುಷೋತ್ತಮ್ ಟಿ.ವಿ., ಸೈಯದ್ ಅಬ್ದುಲ್ ರೆಹಮಾನ್, ಕೃಷ್ಣಮೂರ್ತಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎ. ಉಮೇಶ್, ಎಂ.ಮುನಿಯಪ್ಲ, ಪ್ರದೀಪ್, ಗಂಗಾಧರ್, ಶ್ರೀನಿವಾಸ್ ತರಿದಾಳ್, ಗಂಗರಾಜು ಅವರನ್ನು ಆಯ್ಕೆ ಮಾಡಲಾಯಿತು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳಿಗೆ ಹೂಗುಚ್ಛ ನೀಡುವ ಮೂಲಕ ಅಭಿನಂದಿಸಲಾಯಿತು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್, ಮುರಳಿ ಮೋಹನ್, ಗೌರವ ಅಧ್ಯಕ್ಷ ಷಫಿ, ನಿರ್ದೇಶಕರಾದ ಜಿಕೆ ಸುಗ್ಗರಾಜು, ಆನಂದ್ ವೈ, ದೇವರಾಜ್, ರಾಘವೇಂದ್ರ ಚಾರ್, ಸತೀಶ್, ದಿನ್ನೋರ್ ಮಂಜುನಾಥ್, ರಮೇಶ್ ಬೀದಿ ಮನೆ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಶ್ರೀಕಾಂತ್ ಮತ್ತಿತರರಿದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…