ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ವಿವಿಧ ಘಟಕಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಸ್ಥಾನಕ್ಕೆ ಮುಖಂಡರನ್ನು ಆಯ್ಕೆ ಮಾಡಲಾಯಿತು.
ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಆರ್. ಆನಂದಮೂರ್ತಿ, ತಾಲ್ಲೂಕು ರೈತ ಮೋರ್ಚಾ ಉಪಾಧ್ಯಕ್ಷರಾಗಿ ರಾಜಗೋಪಾಲ್ (ಪಾಲಿ) ತಾಲೂಕು ಉಪಾಧ್ಯಕ್ಷರಾಗಿ ಸಿದ್ದರಾಮಣ್ಣ, ತಾಲೂಕು ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಎಸ್.ಎಸ್.ಟಿ. ಮಂಜುನಾಥ್, ತಾಲೂಕು ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕನಸವಾಡಿ ರಾಜಣ್ಣ, ಮಧುರೆ ಹೋಬಳಿ ಬಿಜೆಪಿ ಅಧ್ಯಕ್ಷರಾಗಿ ನಾಗರಾಜ ಬಾಬು, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್ ಅವರನ್ನು ನೇಮಿಸಲಾಗಿದೆ.
ನೂತನವಾಗಿ ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ವಿವಿಧ ಘಟಕಗಳಿಗೆ ಆಯ್ಕೆಯಾದವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ವೇಳೆ ತಾಲೂಕು ಬಿಜೆಪಿ ಅಧ್ಯಕ್ಷ ಕೆ.ನಾಗೇಶ್, ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು ಸೇರಿದಂತೆ ಇತರರು ಆಯ್ಕೆಯಾದ ಎಲ್ಲರಿಗು ಶುಭಕೋರಿದ್ದಾರೆ.
ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದು ತುಂಬಾ ಸಂತೋಷದ ವಿಷಯ. ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತೇನೆ. ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಶ್ರಮಿಸುತ್ತೇನೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೂ ತಲುಪಿಸುವ ಕಾರ್ಯ ಮಾಡಲಾಗುವುದು. ಶಾಸಕ ಧೀರಜ್ ಮುನಿರಾಜ್ ಮಾರ್ಗದರ್ಶನದಲ್ಲಿ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಯುವಕರಿಗೆ ಸಿಗುವಂತೆ ಮಾಡಲಾಗುವುದು ಎಂದು ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್ ತಿಳಿಸಿದರು.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…