ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ವಿವಿಧ ಘಟಕಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಸ್ಥಾನಕ್ಕೆ ಮುಖಂಡರನ್ನು ಆಯ್ಕೆ ಮಾಡಲಾಯಿತು.
ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಆರ್. ಆನಂದಮೂರ್ತಿ, ತಾಲ್ಲೂಕು ರೈತ ಮೋರ್ಚಾ ಉಪಾಧ್ಯಕ್ಷರಾಗಿ ರಾಜಗೋಪಾಲ್ (ಪಾಲಿ) ತಾಲೂಕು ಉಪಾಧ್ಯಕ್ಷರಾಗಿ ಸಿದ್ದರಾಮಣ್ಣ, ತಾಲೂಕು ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಎಸ್.ಎಸ್.ಟಿ. ಮಂಜುನಾಥ್, ತಾಲೂಕು ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕನಸವಾಡಿ ರಾಜಣ್ಣ, ಮಧುರೆ ಹೋಬಳಿ ಬಿಜೆಪಿ ಅಧ್ಯಕ್ಷರಾಗಿ ನಾಗರಾಜ ಬಾಬು, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್ ಅವರನ್ನು ನೇಮಿಸಲಾಗಿದೆ.
ನೂತನವಾಗಿ ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ವಿವಿಧ ಘಟಕಗಳಿಗೆ ಆಯ್ಕೆಯಾದವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ವೇಳೆ ತಾಲೂಕು ಬಿಜೆಪಿ ಅಧ್ಯಕ್ಷ ಕೆ.ನಾಗೇಶ್, ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು ಸೇರಿದಂತೆ ಇತರರು ಆಯ್ಕೆಯಾದ ಎಲ್ಲರಿಗು ಶುಭಕೋರಿದ್ದಾರೆ.
ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದು ತುಂಬಾ ಸಂತೋಷದ ವಿಷಯ. ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತೇನೆ. ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಶ್ರಮಿಸುತ್ತೇನೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೂ ತಲುಪಿಸುವ ಕಾರ್ಯ ಮಾಡಲಾಗುವುದು. ಶಾಸಕ ಧೀರಜ್ ಮುನಿರಾಜ್ ಮಾರ್ಗದರ್ಶನದಲ್ಲಿ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಯುವಕರಿಗೆ ಸಿಗುವಂತೆ ಮಾಡಲಾಗುವುದು ಎಂದು ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್ ತಿಳಿಸಿದರು.
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…