ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಪತ್ರ ವಿತರಿಸಲಾಯಿತು.
ಈ ವೇಳೆ ಸಾಸಲು ಹೋಬಳಿಯ ಕರೆಕಲ್ಲಹಳ್ಲಿ ಗ್ರಾಮದ ಮನೀಶ್ ಯಾದವ್ ಎಂ ಅವರನ್ನು ತಾಲೂಕು ಅಧ್ಯಕ್ಷರಾಗಿ, ರಾಕೇಶ್ ಎನ್. ಅವರನ್ನು ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಶಶಿಕುಮಾರ್ ಎಂ ಅವರನ್ನು ತಾಲೂಕು ಉಪಾಧ್ಯಕ್ಷರಾಗಿ ಹಾಗೂ ಗೋಪಾಲ್ ಆರ್ ಅವರನ್ನು ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಯಾದವ ಯುವ ವೇದಿಕೆಯ ರಾಜ್ಯಾಧ್ಯಕ್ಷ ಸುನಿಲ್ ಯಾದವ್ ಕೆ.ಸಿ, ಕಳೆದ 12 ವರ್ಷಗಳಿಂದ ಯಾದವ ಸಮುದಾಯದ ಸಂಘಟನೆ ಮತ್ತು ಸೇವಾ ಕಾರ್ಯದಲ್ಲಿ ವೇದಿಕೆ ತೊಡಗಿಸಿಕೊಂಡಿದ್ದು, ಯುವಕರನ್ನು ಸಾಮಾಜಿಕ ಹಾಗೂ ರಾಜಕೀಯವಾಗಿ ಸಬಲಗೊಳಿಸುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.
ಹಿಂದುಳಿದ ವರ್ಗದ ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳು ಮನೆಬಾಗಿಲಿಗೆ ತಲುಪುವಂತೆ ಸೇವಾ ಕಾರ್ಯಗಳನ್ನು ಕೈಗೊಳ್ಳಬೇಕಿದ್ದು, ದೊಡ್ಡಬಳ್ಳಾಪುರದ ಹಿರಿಯರು ಹಾಗೂ ಯುವಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮುದಾಯದ ಯುವಶಕ್ತಿಯನ್ನು ಸಂಘಟಿಸುವಂತೆ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.
ಕರ್ನಾಟಕ ಯಾದವ ಯುವ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸುಧಾಕರ್ ಯಾದವ್ ಮಾತನಾಡಿ, ದೊಡ್ಡಬಳ್ಳಾಪುರದ ಯಾದವ ಸಮುದಾಯವು ಪ್ರೀತಿ ಮತ್ತು ವಿಶ್ವಾಸಕ್ಕೆ ಹೆಸರುವಾಸಿಯಾಗಿದೆ. ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಬೇಕು. ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಯಾದವ ಯುವ ವೇದಿಕೆ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷ ಅನಿಲ್ ಯಾದವ್, ರಾಜ್ಯ ಉಪಾಧ್ಯಕ್ಷರಾದ ಉಮೇಶ್ ಯಾದವ್, ಮಂಜುನಾಥ್ ಯಾದವ್, ಚಿಕ್ಕಬಳ್ಳಾಪುರ ಯಾದವ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…