ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಕಾರ್ಮಿಕ ಇಲಾಖೆ ದಾಳಿ: ಬಾಲ ಕಾರ್ಮಿಕನೊಬ್ಬನ ರಕ್ಷಣೆ

ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.

ಈ ತಪಾಸಣೆ ವೇಳೆ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರುಪಡಿಸಿದರು.

ಅಲ್ಲದೇ, ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.

ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.

ಈ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ
ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ‌ಹಾಗೂ ಸೌಮ್ಯ ಹಾಜರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 hour ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

8 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

20 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

20 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

21 hours ago