ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

 

ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ ಹಾಗೂ ಇತರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯ ಒದಗಿಸಲು 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ದೊಡ್ಡಬಳ್ಳಾಪುರ ಟೌನ್ ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿ ಅಧಿಕಾರಿಗಳ ಶ್ರಮ, ಕಾಯಕನಿಷ್ಠೆ ‌ಹಾಗೂ ಪ್ರಾಮಾಣಿಕ ಪ್ರಯತ್ನದಿಂದಾಗಿ ದೊಡ್ಡಬಳ್ಳಾಪುರದ ತಾಲ್ಲೂಕು ಆಸ್ಪತ್ರೆಗೆ ರಾಷ್ಟ್ರ ಮಟ್ಟದ ಗರಿ ಲಭಿಸಿದೆ. ದೊಡ್ಡಬಳ್ಳಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಜಿಲ್ಲೆಗೆ ಮಾದರಿಯಾಗುವಂತೆ ಕಾರ್ಯನಿರರ್ವಹಿಸಬೇಕು.
ಬಸವಣ್ಣನವರು ಹೇಳಿದ ಕಾಯಕವೇ ಕೈಲಾಸ ಪರಿಪಾಲನೆ ಮಾಡಬೇಕು. ದೊಡ್ಡಬಳ್ಳಾಪುರದ‌ ಸರ್ಕಾರಿ ಆಸ್ಪತ್ರೆ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಮುಂಚೂಣಿಯಲ್ಲಿದೆ, ಈ ಸೇವೆ ಇದೇ ರೀತಿ ಮುಂದಿನ ದಿನಗಳಲ್ಲೂ ಮುಂದುವರೆಯಲಿ ಎಂದು ವೈದ್ಯಾಧಿಕಾರಿಗಳಿಗೆ ಅಭಿನಂದಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆಗೆ ಈಗಾಗಲೇ ಶಿಲಾನ್ಯಾಸ ರೂಪುಗೊಂಡಿದ್ದು, ಶೀಘ್ರವೇ ಮಂಜೂರಾತಿಗಾಗಿ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಉಪಯೋಗವಾಗಲಿದೆ. ದೊಡ್ಡಬಳ್ಳಾಪುರ ನಗರ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವುದರಿಂದ ಅಪಘಾತಗಳ ಸಂಭವ ಹೆಚ್ಚಾಗಿ ಕಂಡುಬರುತ್ತಿದೆ‌. ಇದರಿಂದಾಗಿ ಕೇಂದ್ರ ಸರಕಾರ ವತಿಯಿಂದ ಕ್ರಿಟಿಕಲ್ ಕೇರ್ ಯುನಿಟ್ ಸಹ ಸ್ಥಾಪಿತವಾಗಲಿದ್ದು, ಜನರಿಗೆ ಇದು ಉಪಯೋಗವಾಗಲಿದೆ.
ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಸಾರ್ವಜನಿಕರಿಗೆ ಲಕ್ಷಾಂತರ ರೂಗಳ ಖರ್ಚು ತಪ್ಪಲಿದೆ ಎಂದು ಸಚಿವರು ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಶಾಸಕ ಧೀರಜ್ ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ
ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆ ಅತ್ಯುತ್ತಮ ಸೇವೆ ಸಲ್ಲಿಸುತ್ತಾ ಬಂದಿದೆ. ಇಲ್ಲಿನ ಅಧಿಕಾರಿಗಳ ಸಹಭಾಗಿತ್ವದಲ್ಲಿ ಕಳೆದ ಮೂರು ತಿಂಗಳ ಹಿಂದಷ್ಟೆ ಕೇಂದ್ರ ಸರಕಾರದ ಆರೋಗ್ಯ ಇಲಾಖೆಯ ವತಿಯಿಂದ ತಾಲ್ಲೂಕು ಮಟ್ಟದ ಅತಿ ಉತ್ತಮ ಆಸ್ಪತ್ರೆ ಎಂದು ಬಿರುದು ಪಡೆದುಕೊಂಡಿದೆ. ನಮ್ಮ ಸುತ್ತ ಮುತ್ತಲು ಇರುವ ಮೂರು ಜಿಲ್ಲೆಗಳಿಗಿಂತ ಅತಿ ಹೆಚ್ಚು ಮಕ್ಕಳ ಜನನ ಆಗುತ್ತಿರುವ ಆಸ್ಪತ್ರೆ ಇದಾಗಿದೆ. ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ದೊಡ್ಡಬಳ್ಳಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪಾತ್ರವಾಗಿದೆ ಎಂದರು.

ದೊಡ್ಡಬಳ್ಳಾಪುರ ನಗರದ ಸಿದ್ದೇನಾಯಕನಹಳ್ಳಿಯಲ್ಲಿ 195 ಕೋಟಿ ರೂ ಗಳ ವೆಚ್ಚದ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೆ ಒಪ್ಪಿಗೆ ನೀಡಿದೆ. ಇದಲ್ಲದೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅಭಿಮ್ ಯೋಜನೆಯಡಿಯಲ್ಲಿ 50 ಹಾಸಿಗೆಯುಳ್ಳ ಕ್ರಿಟಿಕಲ್ ಕೇರ್ ಯುನಿಟ್(CCU) ಆಸ್ಪತ್ರೆ ದೊಡ್ಡಬಳ್ಳಾಪುರದಲ್ಲಿ ಮುಂಬರುವ ದಿನಗಳಲ್ಲಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು.

*ಆರೋಗ್ಯ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳ ಮೊತ್ತ ಹಾಗೂ ವಿವರ*

ಜಿಲ್ಲೆಯ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಗೆ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2,10,60,000 ರೂಗಳು ಹಾಗೂ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಕನಸವಾಡಿಗೆ ಮೂಲಭೂತ ಸೌಕರ್ಯಗಳ ಉನ್ನತೀಕರಣಕ್ಕಾಗಿ ಒಟ್ಟು 60,28,900 ಲಕ್ಷ ರೂ. ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ ದೊಡ್ಡಬಳ್ಳಾಪುರಕ್ಕೆ ಮೂಲಸೌಕರ್ಯಗಳ ಉನ್ನತೀಕರಣಕ್ಕಾಗಿ ಒಟ್ಟು 61,10,000 ರೂ ಮತ್ತು
ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2,24,82,000 ಕೋಟಿ ರೂ ವೆಚ್ಚ ಸೇರಿ ಜಿಲ್ಲೆಗೆ ಮಂಜೂರಾಗಿರುವ ಒಟ್ಟು ಮೊತ್ತ ರೂ 5,56,80,900 ಕೋಟಿ ರೂ ಗಳಾಗಿರುತ್ತದೆ.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಬಿ.ರಾಜಣ್ಣ, ದೊಡ್ಡಬಳ್ಳಾಪುರ ಉಪ‌ವಿಭಾಗಾಧಿಕಾರಿ ದುರ್ಗಾಶ್ರೀ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್,‌ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನಿಲ್ ಕುಮಾರ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಬಾಲಕೃಷ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ನಗರಸಭೆ ಆಯುಕ್ತರಾದ ಕಾರ್ತಿಕ್ ಈಶ್ವರ್ ಸೇರಿದಂತೆ ನಗರಸಭಾ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

6 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago