ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೆ ಜಿಲ್ಲಾಸ್ಪತ್ರೆ ನಿರ್ಮಾಣ – ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೆ ನಿರ್ಮಾಣ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಜಿಲ್ಲಾ  ಉಸ್ತುವಾರಿ ಸಚಿವರ ಗೃಹ ಕಛೇರಿಯಲ್ಲಿ   ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿಯವರು ಆಸ್ಪತ್ರೆ ನಿರ್ಮಾಣಕ್ಕೆ    ಶಂಕುಸ್ಥಾಪನೆ ನೆರವೇರಿಸಿದರೂ ಕಾಮಗಾರಿ ವಿಳಂಬವಾಗುತ್ತಿದೆ. ಶೀಘ್ರ ಕಾಮಗಾರಿ ಪ್ರಾರಂಭ ಪೂರ್ಣಗೊಳಿಸಬೇಕೆಂದು  ನೀಡಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದರು. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕುರಿತು ಸಂಬಂಧಿಸಿದ ಸಚಿವರು ಮತ್ತು ಅಧಿಕಾರಗಳ ಜೊತೆ ಮಾತನಾಡಿದ್ದೇನೆ. ಆಸ್ಪತ್ರೆ ಕಾಮಗಾರಿ ಪೂರ್ಣಗೊಳ್ಳಲು ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಪಡೆಯಲಾಗುವುದು ಎಂದರು.

ಜಿಲ್ಲಾ  ಆಸ್ಪತ್ರೆ  ಹೋರಾಟ ಸಮಿತಿ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ನಗರದ ಸಿದ್ಧೇನಾಯಕನಹಳ್ಳಿ ಗ್ರಾಮದ ಸರ್ವೆ ನಂ.20ರಲ್ಲಿ ಒಟ್ಟು 9.38 ಎಕರೆ ಜಾಗದಲ್ಲಿ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಗೆ 6.8 ಎಕರೆ ಜಾಗ ಹೆಚ್ಚುವರಿ ಸೇರ್ಪಡೆ ಮಾಡಿ ಒಟ್ಟು 16 ಎಕರೆ ಜಮೀನಿನಲ್ಲಿ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಯೋಜನೆಗೆ ಒಟ್ಟು ₹192ಕೋಟಿ ಅನುದಾನ ನಿಗದಿಪಡಿಸಿದೆ. ಆದರೆ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗದೆ ವಿಳಂಬವಾಗುತ್ತಿದೆ. ಮತ್ತೊಂದೆಡೆ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಇಎಸ್‍ಐ ಆಸ್ಪತ್ರೆ ನಿರ್ಮಾಣ ಆಗಿ ವರ್ಷಗಳೇ ಕಳೆದಿವೆ. ಆದರೆ ಉದ್ಘಾಟನೆ ಮಾತ್ರ ಆಗಿಲ್ಲ. ಜಿಲ್ಲಾ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸಬೇಕು ಮತ್ತು ಇಎಸ್ಐ ಆಸ್ಪತ್ರೆ ಉದ್ಘಾಟನೆ ಆಗಬೇಕು. ‌ ಈ ಆಸ್ಪತ್ರೆಗಳಿಂದ ದೊಡ್ಡಬಳ್ಳಾಪುರ ಮಾತ್ರವಲ್ಲದೇ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ಗೌರಿಬಿದನೂರು ಸೇರಿದಂತೆ ತಾಲ್ಲೂಕಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗುತ್ತದೆ. ಅ.19 ರಂದು ಭಾನುವಾರ ದೊಡ್ಡಬಳ್ಳಾಪುರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಆಸ್ಪತ್ರೆಗೆ ಅನುದಾನ ಬಿಡುಗಡೆ ಮತ್ತು ಇಎಸ್ಐ ಆಸ್ಪತ್ರೆ ಉದ್ಘಾಟನೆ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಬೇಕೆಂದರು.

ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡುವ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿಯ
ಮುಖಂಡರಾದ ಸಂಜೀವ್ ನಾಯಕ್, ಆರ್‌.ಚಂದ್ರತೇಜಸ್ವಿ, ಪಿ.ಗೋವಿಂದರಾಜು, ಪಿ.ಎ.ವೆಂಕಟೇಶ್, ಮುನಿಪಾಪಣ್ಣ, ಚಿದಾನಂದ್, ಡಿ.ವೆಂಕಟೇಶ್, ನವೀನ್, ಪಿ.ಕೆ.ವೆಂಕಟೇಶ್, ಸುಬ್ಬಣ್ಣ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

33 minutes ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

53 minutes ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

12 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

13 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago