ದೊಡ್ಡಬಳ್ಳಾಪುರ ನಗರಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ.
ನಗರಸಭಾ ಆಡಳಿತ ಕಚೇರಿ ಕೂಗಳತೆ ದೂರದಲ್ಲಿರುವ ಮಾರುತಿನಗರ ಸಮೀಪ ಹಾದುಹೋಗುವ ಕೋರ್ಟ್ ರಸ್ತೆಯಲ್ಲಿ ಗುಂಪುಗುಂಪಾಗಿ ನಾಯಿಗಳು ನಡು ರಸ್ತೆಯಲ್ಲಿ ನಿಂತು ಜನ ಓಡಾಡುವಾಗ ಮತ್ತು ವಾಹನ ಚಲಾಯಿಸುವ ವೇಳೆ ಹಿಂಬಾಲಿಸಿಕೊಂಡು ಬೊಗಳುತ್ತವೆ.
ಈ ರಸ್ತೆಯಲ್ಲಿ ಪ್ರತಿನಿತ್ಯ ನಾಯಿಗಳ ದಂಡು ಬೀಡು ಬಿಟ್ಟಿರುತ್ತದೆ. ಈ ಪ್ರದೇಶಗಳಲ್ಲಿ ಜನ ಓಡಾಡಲು ಭಯಪಡುತ್ತಾರೆ. ಸೈಕಲ್ ಮತ್ತು ಬೈಕ್ ಸಂಚರಿಸುವ ವೇಳೆ ಹಿಂಬಾಲಿಸಿಕೊಂಡು ಬಂದು ದಾಳಿ ನಡೆಸುತ್ತವೆ. ಈ ಘಟನೆಯಲ್ಲಿ ಹಲವು ಮಂದಿ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ರಾತ್ರಿ ವೇಳೆ ನಾಯಿಗಳ ಕೂಗಾಟ, ಚೀರಾಟದಿಂದ ನೆಮ್ಮದಿಯ ನಿದ್ದೆ ಮಾಡಿ ಹಲವು ತಿಂಗಳು ಕಳೆದಿದೆ. ನಾಯಿಗಳ ಉಪಟಳಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…