ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ದೊಡ್ಡಬಳ್ಳಾಪುರ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ನಗರ ಠಾಣೆ ವ್ತಾಪ್ತಿಯ ರೌಡಿಶೀಟರ್ ಗಳನ್ನು ಠಾಣೆಗೆ ಕರೆಸಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಇರಬೇಕು. ಒಂದು ವೇಳೆ ಕಾನೂನಿನ ಎಲ್ಲೆ ಮೀರಿ ನಡೆದುಕೊಂಡರೆ ತಕ್ಕ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ಎಚ್ಚರಿಕೆ ನೀಡಿದರು.
ರೌಡಿ ಪರೇಡ್ ನಲ್ಲಿ ಇಪ್ಪತ್ತಕ್ಕೂ ಹೆಚ್ಚು ರೌಡಿ ಶೀಟರ್ ಗಳು ಪಾಲ್ಗೊಂಡಿದ್ದರು. ಹತ್ತು ವರ್ಷಗಳ ಕಾಲ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸದಿದ್ದರೆ ರೌಡಿ ಪಟ್ಟಿಯಿಂದ ಕೈ ಬಿಡಲಾಗುವುದು ಎಂದು ಇನ್ಸ್ ಪೆಕ್ಟರ್ ಅಮರೇಶ್ ಗೌಡ ಹೇಳಿದರು.
ಪದೇ ಪದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಮುಲಾಜಿಲ್ಲದೇ ಗಡಿಪಾರು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…