ಎಲ್ಲಾ ಪೊಲೀಸ್ ಠಾಣೆಗಳು ವಿದ್ಯಾರ್ಥಿಗಳಿಗೆ ತೆರೆದ ಮನೆಯಂತಾಗಿ, ಪೊಲೀಸ್ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಬಾಂಧವ್ಯ ಧನಾತ್ಮಕವಾಗಿ ವೃದ್ಧಿಯಾಗಬೇಕು. ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮುಖೇನ ಉತ್ತಮ ನಾಗರಿಕರನ್ನಾಗಿ ರೂಪಿಸಲು ತೆರೆದ ಮನೆ ಕಾರ್ಯಕ್ರವವನ್ನು ಆಯೋಜನೆ ಮಾಡಲಾಗಿದೆ.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕಾನೂನು ಅರಿವು, ಮಾನವೀಯ ಮೌಲ್ಯಗಳ ಅಳವಡಿಕೆ ಅತ್ಯಗತ್ಯ. ತಾನು ತಪ್ಪು ಮಾಡದೇ, ಇನ್ನೊಬ್ಬರು ತಪ್ಪು ಮಾಡದಂತೆ ಕಾನೂನು ಚೌಕಟ್ಟಿನಲ್ಲಿ ಇರುವುದು ಎಲ್ಲರ ಜವಾಬ್ದಾರಿ. ಸಮಾಜವನ್ನು ಶಾಂತ ರೀತಿಯಿಂದ ಇಡಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡವಂತಾಗಬೇಕು. ಈ ನಿಟ್ಟಿನಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ಇರುವ ನಿಟ್ಟಿನಲ್ಲಿ ತೆರೆದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮನೆಯಿಂದ ಕಾಲೇಜಿಗೆ ಬಂದಾಗ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವರೀತಿ ರಕ್ಷಣೆ ಮಾಡಿಕೊಳ್ಳಬೇಕು. ದುಷ್ಟರು, ಪುಂಡರ ಹಾವಳಿಗಳಿಂದ ಯಾವ ರೀತಿ ಪಾರಾಗಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸ್ ಠಾಣೆ ಮತ್ತು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಯಿತು.
ಸಮನ್ಸ್ ನೋಂದಣಿ, ವಾರಂಟ್ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ ಸೇರಿದಂತೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಯಿತು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…