ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ- ಕಾಲೇಜು ವಿದ್ಯಾರ್ಥಿಗಳಿಗೆ ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಿದ ಇನ್ಸ್ಪೆಕ್ಟರ್ ಆರ್.ದಯಾನಂದ

ಎಲ್ಲಾ ಪೊಲೀಸ್ ಠಾಣೆಗಳು ವಿದ್ಯಾರ್ಥಿಗಳಿಗೆ ತೆರೆದ ಮನೆಯಂತಾಗಿ, ಪೊಲೀಸ್ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಬಾಂಧವ್ಯ ಧನಾತ್ಮಕವಾಗಿ ವೃದ್ಧಿಯಾಗಬೇಕು. ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮುಖೇನ ಉತ್ತಮ ನಾಗರಿಕರನ್ನಾಗಿ ರೂಪಿಸಲು ತೆರೆದ ಮನೆ ಕಾರ್ಯಕ್ರವವನ್ನು ಆಯೋಜನೆ ಮಾಡಲಾಗಿದೆ.

ಇಂದಿನ‌ ಮಕ್ಕಳೇ ಮುಂದಿನ ಪ್ರಜೆಗಳು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕಾನೂನು ಅರಿವು, ಮಾನವೀಯ ಮೌಲ್ಯಗಳ ಅಳವಡಿಕೆ ಅತ್ಯಗತ್ಯ. ತಾನು ತಪ್ಪು‌ ಮಾಡದೇ, ಇನ್ನೊಬ್ಬರು ತಪ್ಪು ಮಾಡದಂತೆ ಕಾನೂನು ಚೌಕಟ್ಟಿನಲ್ಲಿ ಇರುವುದು ಎಲ್ಲರ ಜವಾಬ್ದಾರಿ. ಸಮಾಜವನ್ನು ಶಾಂತ ರೀತಿಯಿಂದ ಇಡಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡವಂತಾಗಬೇಕು. ಈ ನಿಟ್ಟಿನಲ್ಲಿ ಜನ ಸ್ನೇಹಿ‌ ಪೊಲೀಸ್ ವ್ಯವಸ್ಥೆ ಇರುವ ನಿಟ್ಟಿನಲ್ಲಿ ತೆರೆದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ, ಲೈಂಗಿಕ ದೌರ್ಜನ್ಯ ತಡೆಯುವುದು, ಬಾಲ್ಯ ವಿವಾಹ ನಿರ್ಮೂಲನೆ, ಕಿರುಕುಳ, ಬಾಲಕಾರ್ಮಿಕತೆಯ ನಿರ್ಮೂಲನೆ, ಅತ್ಯಾಚಾರ, ಕಿಡ್ನ್ಯಾಪ್,  ಸರಗಳತನ, ಜೇಬುಗಳ್ಳತನದ ಬಗ್ಗೆ ಎಚ್ಚರಿಕೆ, ಸೈಬರ್ ಅಪರಾಧಗಳ ಬಗ್ಗೆ ಮುನ್ನೆಚ್ಚರಿಕೆ, ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಅದೇರೀತಿ ತಪ್ಪಿತಸ್ಥರ ಮೇಲೆ ಕಾನೂನು ಯಾವ ರೀತಿ ಕ್ರಮ‌ ಕೈಗೊಳ್ಳುತ್ತದೆ. ಪೊಲೀಸ್ ಇಲಾಖೆಯ ಕರ್ತವ್ಯ, ಜವಾಬ್ದಾರಿ ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ನಗರದ ವಿದ್ಯಾನಿಧಿ ಕಾಲೇಜು ವಿದ್ಯಾರ್ಥಿಗಳಿಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅರ್.ದಯಾನಂದ ಅವರು ತಿಳಿಸಿಕೊಟ್ಟರು.

ಮನೆಯಿಂದ ಕಾಲೇಜಿಗೆ ಬಂದಾಗ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವರೀತಿ ರಕ್ಷಣೆ ಮಾಡಿಕೊಳ್ಳಬೇಕು. ದುಷ್ಟರು, ಪುಂಡರ ಹಾವಳಿಗಳಿಂದ ಯಾವ ರೀತಿ ಪಾರಾಗಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಯಿತು.

ಪೊಲೀಸ್ ಕರ್ತವ್ಯ ನಿರ್ವಹಣಾ ಸೆಕ್ಷನ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಅಪರಾಧ ವಿಭಾಗ, ತನಿಖಾಧಿಕಾರಿ ವಿಭಾಗ, ಕಂಪ್ಯೂಟರ್‌ ಸೆಕ್ಷನ್, ಠಾಣಾ ಬರಹಗಾರರ ವಿಭಾಗ, ಠಾಣಾ ದಿನಚರಿ, ಅರ್ಜಿಗಳ ಬಗ್ಗೆಯೂ ಪರಿಚಯ ಮಾಡಿಕೊಡಲಾಯಿತು.

ಸಮನ್ಸ್‌ ನೋಂದಣಿ, ವಾರಂಟ್‌ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್‌, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ ಸೇರಿದಂತೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಯಿತು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

8 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

8 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

16 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago