ಎಲ್ಲಾ ಪೊಲೀಸ್ ಠಾಣೆಗಳು ವಿದ್ಯಾರ್ಥಿಗಳಿಗೆ ತೆರೆದ ಮನೆಯಂತಾಗಿ, ಪೊಲೀಸ್ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಬಾಂಧವ್ಯ ಧನಾತ್ಮಕವಾಗಿ ವೃದ್ಧಿಯಾಗಬೇಕು. ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮುಖೇನ ಉತ್ತಮ ನಾಗರಿಕರನ್ನಾಗಿ ರೂಪಿಸಲು ತೆರೆದ ಮನೆ ಕಾರ್ಯಕ್ರವವನ್ನು ಆಯೋಜನೆ ಮಾಡಲಾಗಿದೆ.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕಾನೂನು ಅರಿವು, ಮಾನವೀಯ ಮೌಲ್ಯಗಳ ಅಳವಡಿಕೆ ಅತ್ಯಗತ್ಯ. ತಾನು ತಪ್ಪು ಮಾಡದೇ, ಇನ್ನೊಬ್ಬರು ತಪ್ಪು ಮಾಡದಂತೆ ಕಾನೂನು ಚೌಕಟ್ಟಿನಲ್ಲಿ ಇರುವುದು ಎಲ್ಲರ ಜವಾಬ್ದಾರಿ. ಸಮಾಜವನ್ನು ಶಾಂತ ರೀತಿಯಿಂದ ಇಡಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡವಂತಾಗಬೇಕು. ಈ ನಿಟ್ಟಿನಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ಇರುವ ನಿಟ್ಟಿನಲ್ಲಿ ತೆರೆದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮನೆಯಿಂದ ಕಾಲೇಜಿಗೆ ಬಂದಾಗ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವರೀತಿ ರಕ್ಷಣೆ ಮಾಡಿಕೊಳ್ಳಬೇಕು. ದುಷ್ಟರು, ಪುಂಡರ ಹಾವಳಿಗಳಿಂದ ಯಾವ ರೀತಿ ಪಾರಾಗಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸ್ ಠಾಣೆ ಮತ್ತು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಯಿತು.
ಸಮನ್ಸ್ ನೋಂದಣಿ, ವಾರಂಟ್ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ ಸೇರಿದಂತೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಯಿತು.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…