ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ- ಕಾಲೇಜು ವಿದ್ಯಾರ್ಥಿಗಳಿಗೆ ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಿದ ಇನ್ಸ್ಪೆಕ್ಟರ್ ಆರ್.ದಯಾನಂದ

ಎಲ್ಲಾ ಪೊಲೀಸ್ ಠಾಣೆಗಳು ವಿದ್ಯಾರ್ಥಿಗಳಿಗೆ ತೆರೆದ ಮನೆಯಂತಾಗಿ, ಪೊಲೀಸ್ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಬಾಂಧವ್ಯ ಧನಾತ್ಮಕವಾಗಿ ವೃದ್ಧಿಯಾಗಬೇಕು. ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮುಖೇನ ಉತ್ತಮ ನಾಗರಿಕರನ್ನಾಗಿ ರೂಪಿಸಲು ತೆರೆದ ಮನೆ ಕಾರ್ಯಕ್ರವವನ್ನು ಆಯೋಜನೆ ಮಾಡಲಾಗಿದೆ.

ಇಂದಿನ‌ ಮಕ್ಕಳೇ ಮುಂದಿನ ಪ್ರಜೆಗಳು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕಾನೂನು ಅರಿವು, ಮಾನವೀಯ ಮೌಲ್ಯಗಳ ಅಳವಡಿಕೆ ಅತ್ಯಗತ್ಯ. ತಾನು ತಪ್ಪು‌ ಮಾಡದೇ, ಇನ್ನೊಬ್ಬರು ತಪ್ಪು ಮಾಡದಂತೆ ಕಾನೂನು ಚೌಕಟ್ಟಿನಲ್ಲಿ ಇರುವುದು ಎಲ್ಲರ ಜವಾಬ್ದಾರಿ. ಸಮಾಜವನ್ನು ಶಾಂತ ರೀತಿಯಿಂದ ಇಡಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡವಂತಾಗಬೇಕು. ಈ ನಿಟ್ಟಿನಲ್ಲಿ ಜನ ಸ್ನೇಹಿ‌ ಪೊಲೀಸ್ ವ್ಯವಸ್ಥೆ ಇರುವ ನಿಟ್ಟಿನಲ್ಲಿ ತೆರೆದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ, ಲೈಂಗಿಕ ದೌರ್ಜನ್ಯ ತಡೆಯುವುದು, ಬಾಲ್ಯ ವಿವಾಹ ನಿರ್ಮೂಲನೆ, ಕಿರುಕುಳ, ಬಾಲಕಾರ್ಮಿಕತೆಯ ನಿರ್ಮೂಲನೆ, ಅತ್ಯಾಚಾರ, ಕಿಡ್ನ್ಯಾಪ್,  ಸರಗಳತನ, ಜೇಬುಗಳ್ಳತನದ ಬಗ್ಗೆ ಎಚ್ಚರಿಕೆ, ಸೈಬರ್ ಅಪರಾಧಗಳ ಬಗ್ಗೆ ಮುನ್ನೆಚ್ಚರಿಕೆ, ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಅದೇರೀತಿ ತಪ್ಪಿತಸ್ಥರ ಮೇಲೆ ಕಾನೂನು ಯಾವ ರೀತಿ ಕ್ರಮ‌ ಕೈಗೊಳ್ಳುತ್ತದೆ. ಪೊಲೀಸ್ ಇಲಾಖೆಯ ಕರ್ತವ್ಯ, ಜವಾಬ್ದಾರಿ ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ನಗರದ ವಿದ್ಯಾನಿಧಿ ಕಾಲೇಜು ವಿದ್ಯಾರ್ಥಿಗಳಿಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅರ್.ದಯಾನಂದ ಅವರು ತಿಳಿಸಿಕೊಟ್ಟರು.

ಮನೆಯಿಂದ ಕಾಲೇಜಿಗೆ ಬಂದಾಗ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವರೀತಿ ರಕ್ಷಣೆ ಮಾಡಿಕೊಳ್ಳಬೇಕು. ದುಷ್ಟರು, ಪುಂಡರ ಹಾವಳಿಗಳಿಂದ ಯಾವ ರೀತಿ ಪಾರಾಗಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಯಿತು.

ಪೊಲೀಸ್ ಕರ್ತವ್ಯ ನಿರ್ವಹಣಾ ಸೆಕ್ಷನ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಅಪರಾಧ ವಿಭಾಗ, ತನಿಖಾಧಿಕಾರಿ ವಿಭಾಗ, ಕಂಪ್ಯೂಟರ್‌ ಸೆಕ್ಷನ್, ಠಾಣಾ ಬರಹಗಾರರ ವಿಭಾಗ, ಠಾಣಾ ದಿನಚರಿ, ಅರ್ಜಿಗಳ ಬಗ್ಗೆಯೂ ಪರಿಚಯ ಮಾಡಿಕೊಡಲಾಯಿತು.

ಸಮನ್ಸ್‌ ನೋಂದಣಿ, ವಾರಂಟ್‌ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್‌, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ ಸೇರಿದಂತೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಯಿತು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

3 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

12 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago