ಎಲ್ಲಾ ಪೊಲೀಸ್ ಠಾಣೆಗಳು ವಿದ್ಯಾರ್ಥಿಗಳಿಗೆ ತೆರೆದ ಮನೆಯಂತಾಗಿ, ಪೊಲೀಸ್ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಬಾಂಧವ್ಯ ಧನಾತ್ಮಕವಾಗಿ ವೃದ್ಧಿಯಾಗಬೇಕು. ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮುಖೇನ ಉತ್ತಮ ನಾಗರಿಕರನ್ನಾಗಿ ರೂಪಿಸಲು ತೆರೆದ ಮನೆ ಕಾರ್ಯಕ್ರವವನ್ನು ಆಯೋಜನೆ ಮಾಡಲಾಗಿದೆ.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕಾನೂನು ಅರಿವು, ಮಾನವೀಯ ಮೌಲ್ಯಗಳ ಅಳವಡಿಕೆ ಅತ್ಯಗತ್ಯ. ತಾನು ತಪ್ಪು ಮಾಡದೇ, ಇನ್ನೊಬ್ಬರು ತಪ್ಪು ಮಾಡದಂತೆ ಕಾನೂನು ಚೌಕಟ್ಟಿನಲ್ಲಿ ಇರುವುದು ಎಲ್ಲರ ಜವಾಬ್ದಾರಿ. ಸಮಾಜವನ್ನು ಶಾಂತ ರೀತಿಯಿಂದ ಇಡಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡವಂತಾಗಬೇಕು. ಈ ನಿಟ್ಟಿನಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ಇರುವ ನಿಟ್ಟಿನಲ್ಲಿ ತೆರೆದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮನೆಯಿಂದ ಕಾಲೇಜಿಗೆ ಬಂದಾಗ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವರೀತಿ ರಕ್ಷಣೆ ಮಾಡಿಕೊಳ್ಳಬೇಕು. ದುಷ್ಟರು, ಪುಂಡರ ಹಾವಳಿಗಳಿಂದ ಯಾವ ರೀತಿ ಪಾರಾಗಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸ್ ಠಾಣೆ ಮತ್ತು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಯಿತು.
ಸಮನ್ಸ್ ನೋಂದಣಿ, ವಾರಂಟ್ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ ಸೇರಿದಂತೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಯಿತು.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…