ಎಲ್ಲಾ ಪೊಲೀಸ್ ಠಾಣೆಗಳು ವಿದ್ಯಾರ್ಥಿಗಳಿಗೆ ತೆರೆದ ಮನೆಯಂತಾಗಿ, ಪೊಲೀಸ್ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಬಾಂಧವ್ಯ ಧನಾತ್ಮಕವಾಗಿ ವೃದ್ಧಿಯಾಗಬೇಕು. ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮುಖೇನ ಉತ್ತಮ ನಾಗರಿಕರನ್ನಾಗಿ ರೂಪಿಸಲು ತೆರೆದ ಮನೆ ಕಾರ್ಯಕ್ರವವನ್ನು ಆಯೋಜನೆ ಮಾಡಲಾಗಿದೆ.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕಾನೂನು ಅರಿವು, ಮಾನವೀಯ ಮೌಲ್ಯಗಳ ಅಳವಡಿಕೆ ಅತ್ಯಗತ್ಯ. ತಾನು ತಪ್ಪು ಮಾಡದೇ, ಇನ್ನೊಬ್ಬರು ತಪ್ಪು ಮಾಡದಂತೆ ಕಾನೂನು ಚೌಕಟ್ಟಿನಲ್ಲಿ ಇರುವುದು ಎಲ್ಲರ ಜವಾಬ್ದಾರಿ. ಸಮಾಜವನ್ನು ಶಾಂತ ರೀತಿಯಿಂದ ಇಡಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡವಂತಾಗಬೇಕು. ಈ ನಿಟ್ಟಿನಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ಇರುವ ನಿಟ್ಟಿನಲ್ಲಿ ತೆರೆದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮನೆಯಿಂದ ಕಾಲೇಜಿಗೆ ಬಂದಾಗ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವರೀತಿ ರಕ್ಷಣೆ ಮಾಡಿಕೊಳ್ಳಬೇಕು. ದುಷ್ಟರು, ಪುಂಡರ ಹಾವಳಿಗಳಿಂದ ಯಾವ ರೀತಿ ಪಾರಾಗಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸ್ ಠಾಣೆ ಮತ್ತು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಯಿತು.
ಸಮನ್ಸ್ ನೋಂದಣಿ, ವಾರಂಟ್ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ ಸೇರಿದಂತೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…