ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ- ಕಾಲೇಜು ವಿದ್ಯಾರ್ಥಿಗಳಿಗೆ ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಿದ ಇನ್ಸ್ಪೆಕ್ಟರ್ ಆರ್.ದಯಾನಂದ

ಎಲ್ಲಾ ಪೊಲೀಸ್ ಠಾಣೆಗಳು ವಿದ್ಯಾರ್ಥಿಗಳಿಗೆ ತೆರೆದ ಮನೆಯಂತಾಗಿ, ಪೊಲೀಸ್ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಬಾಂಧವ್ಯ ಧನಾತ್ಮಕವಾಗಿ ವೃದ್ಧಿಯಾಗಬೇಕು. ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮುಖೇನ ಉತ್ತಮ ನಾಗರಿಕರನ್ನಾಗಿ ರೂಪಿಸಲು ತೆರೆದ ಮನೆ ಕಾರ್ಯಕ್ರವವನ್ನು ಆಯೋಜನೆ ಮಾಡಲಾಗಿದೆ.

ಇಂದಿನ‌ ಮಕ್ಕಳೇ ಮುಂದಿನ ಪ್ರಜೆಗಳು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕಾನೂನು ಅರಿವು, ಮಾನವೀಯ ಮೌಲ್ಯಗಳ ಅಳವಡಿಕೆ ಅತ್ಯಗತ್ಯ. ತಾನು ತಪ್ಪು‌ ಮಾಡದೇ, ಇನ್ನೊಬ್ಬರು ತಪ್ಪು ಮಾಡದಂತೆ ಕಾನೂನು ಚೌಕಟ್ಟಿನಲ್ಲಿ ಇರುವುದು ಎಲ್ಲರ ಜವಾಬ್ದಾರಿ. ಸಮಾಜವನ್ನು ಶಾಂತ ರೀತಿಯಿಂದ ಇಡಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡವಂತಾಗಬೇಕು. ಈ ನಿಟ್ಟಿನಲ್ಲಿ ಜನ ಸ್ನೇಹಿ‌ ಪೊಲೀಸ್ ವ್ಯವಸ್ಥೆ ಇರುವ ನಿಟ್ಟಿನಲ್ಲಿ ತೆರೆದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ, ಲೈಂಗಿಕ ದೌರ್ಜನ್ಯ ತಡೆಯುವುದು, ಬಾಲ್ಯ ವಿವಾಹ ನಿರ್ಮೂಲನೆ, ಕಿರುಕುಳ, ಬಾಲಕಾರ್ಮಿಕತೆಯ ನಿರ್ಮೂಲನೆ, ಅತ್ಯಾಚಾರ, ಕಿಡ್ನ್ಯಾಪ್,  ಸರಗಳತನ, ಜೇಬುಗಳ್ಳತನದ ಬಗ್ಗೆ ಎಚ್ಚರಿಕೆ, ಸೈಬರ್ ಅಪರಾಧಗಳ ಬಗ್ಗೆ ಮುನ್ನೆಚ್ಚರಿಕೆ, ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಅದೇರೀತಿ ತಪ್ಪಿತಸ್ಥರ ಮೇಲೆ ಕಾನೂನು ಯಾವ ರೀತಿ ಕ್ರಮ‌ ಕೈಗೊಳ್ಳುತ್ತದೆ. ಪೊಲೀಸ್ ಇಲಾಖೆಯ ಕರ್ತವ್ಯ, ಜವಾಬ್ದಾರಿ ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ನಗರದ ವಿದ್ಯಾನಿಧಿ ಕಾಲೇಜು ವಿದ್ಯಾರ್ಥಿಗಳಿಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅರ್.ದಯಾನಂದ ಅವರು ತಿಳಿಸಿಕೊಟ್ಟರು.

ಮನೆಯಿಂದ ಕಾಲೇಜಿಗೆ ಬಂದಾಗ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವರೀತಿ ರಕ್ಷಣೆ ಮಾಡಿಕೊಳ್ಳಬೇಕು. ದುಷ್ಟರು, ಪುಂಡರ ಹಾವಳಿಗಳಿಂದ ಯಾವ ರೀತಿ ಪಾರಾಗಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಯಿತು.

ಪೊಲೀಸ್ ಕರ್ತವ್ಯ ನಿರ್ವಹಣಾ ಸೆಕ್ಷನ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಅಪರಾಧ ವಿಭಾಗ, ತನಿಖಾಧಿಕಾರಿ ವಿಭಾಗ, ಕಂಪ್ಯೂಟರ್‌ ಸೆಕ್ಷನ್, ಠಾಣಾ ಬರಹಗಾರರ ವಿಭಾಗ, ಠಾಣಾ ದಿನಚರಿ, ಅರ್ಜಿಗಳ ಬಗ್ಗೆಯೂ ಪರಿಚಯ ಮಾಡಿಕೊಡಲಾಯಿತು.

ಸಮನ್ಸ್‌ ನೋಂದಣಿ, ವಾರಂಟ್‌ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್‌, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ ಸೇರಿದಂತೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಯಿತು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

15 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago