ಎಲ್ಲಾ ಪೊಲೀಸ್ ಠಾಣೆಗಳು ವಿದ್ಯಾರ್ಥಿಗಳಿಗೆ ತೆರೆದ ಮನೆಯಂತಾಗಿ, ಪೊಲೀಸ್ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಬಾಂಧವ್ಯ ಧನಾತ್ಮಕವಾಗಿ ವೃದ್ಧಿಯಾಗಬೇಕು. ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮುಖೇನ ಉತ್ತಮ ನಾಗರಿಕರನ್ನಾಗಿ ರೂಪಿಸಲು ತೆರೆದ ಮನೆ ಕಾರ್ಯಕ್ರವವನ್ನು ಆಯೋಜನೆ ಮಾಡಲಾಗಿದೆ.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕಾನೂನು ಅರಿವು, ಮಾನವೀಯ ಮೌಲ್ಯಗಳ ಅಳವಡಿಕೆ ಅತ್ಯಗತ್ಯ. ತಾನು ತಪ್ಪು ಮಾಡದೇ, ಇನ್ನೊಬ್ಬರು ತಪ್ಪು ಮಾಡದಂತೆ ಕಾನೂನು ಚೌಕಟ್ಟಿನಲ್ಲಿ ಇರುವುದು ಎಲ್ಲರ ಜವಾಬ್ದಾರಿ. ಸಮಾಜವನ್ನು ಶಾಂತ ರೀತಿಯಿಂದ ಇಡಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡವಂತಾಗಬೇಕು. ಈ ನಿಟ್ಟಿನಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆ ಇರುವ ನಿಟ್ಟಿನಲ್ಲಿ ತೆರೆದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮನೆಯಿಂದ ಕಾಲೇಜಿಗೆ ಬಂದಾಗ ವಿದ್ಯಾರ್ಥಿಗಳು ತಮ್ಮನ್ನು ತಾವು ಯಾವರೀತಿ ರಕ್ಷಣೆ ಮಾಡಿಕೊಳ್ಳಬೇಕು. ದುಷ್ಟರು, ಪುಂಡರ ಹಾವಳಿಗಳಿಂದ ಯಾವ ರೀತಿ ಪಾರಾಗಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸ್ ಠಾಣೆ ಮತ್ತು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಯಿತು.
ಸಮನ್ಸ್ ನೋಂದಣಿ, ವಾರಂಟ್ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ ಸೇರಿದಂತೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಲಾಯಿತು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…