ದೊಡ್ಡಬಳ್ಳಾಪುರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ-ಡಿಸಿ ಎ.ಬಿ ಬಸವರಾಜು

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ನಾಗರಕೆರೆಯನ್ನು ಪುನರುಜ್ಜೀವನಗೊಳಿಸುವ ಸಂಬಂಧ ಫಾಕ್ಸ್ ಕಾನ್ (Foxcon) ಸಂಸ್ಥೆ ರವರು ರೂ.03 ಕೋಟಿಯ ಸಿ.ಇ.ಆರ್ (ಕಾರ್ಪೋರೇಟ್ ಎನ್ವಿರಾನ್ಮೆಂಟ್ ರೆಸ್ಪಾನ್ಸಿಬಲ್) ಅನುದಾನದಡಿ ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫಾಕ್ಸ್ ಕಾನ್ ಸಂಸ್ಥೆಯವರು ನಾಗರಕೆರೆ ಪುನರುಜ್ಜೀವನಗೊಳಿಸುವ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದೆ. ಈ ಕುರಿತು ಇಂದು ವಿವಿಧ ಇಲಾಖೆಗಳ ಸಮನ್ವಯ ದೊಂದಿಗೆ ಕೂಲಂಕಷವಾಗಿ ಚರ್ಚಿಸಲಾಗಿದೆ.

ಕರೆ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗಳ್ಳಲಾಗುತ್ತಿರುವ ಕಾಮಗಾರಿಯ ಸಂಬಂಧ ವಿವಿದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಸಲಹೆಗಳನ್ನು ಪಡೆದು ಅಂತಿಮವಾಗಿ ಫಾಕ್ಸ್ ಕಾನ್ (Foxcon) ರವರು ಸಿಇಆರ್ (corporate environment responsible) ಅನುದಾನದಡಿ ಸಿದ್ಧಪಡಿಸಲಾಗಿರುವ ವಿಸ್ತ್ರತ ಯೋಜನಾ ವರದಿಯನ್ನು ಅನುಮೋದನೆಗಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅನುಮೋದನೆ ಬಂದ ನಂತರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

*ಕೈಗಾರಿಕೆಗಳ ವಿಸ್ತೃತ ವರದಿ ನೀಡಲು ಸೂಚನೆ*
ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ನೀರಿನ ಮೂಲ, ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ, ತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿ ವರದಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾದ ರಮೇಶ್.ಬಿ.ಎಸ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಶ್ರೀಕಾಂತ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಅಂತರ್ಜಲ ಇಲಾಖೆ ಹಿರಿಯ ಭೂ ವಿಜ್ಞಾನಿ ಪಲ್ಲವಿ ಪರಿಸರ ಅಧಿಕಾರಿ ವಿಜಯ, Foxcon ಸಂಸ್ಥೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಫೆಬ್ರವರಿ 06, 2026*: ಕೆಪಿಟಿಸಿಎಲ್ ವತಿಯಿಂದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ಥೀಮ್ ಪಾರ್ಕ್ ಕಾಮಗಾರಿಯನ್ನು ಏಪ್ರಿಲ್ ಒಳಗಾಗಿ…

10 hours ago

U19 World Cup: ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ 175 ರನ್: 6ನೇ ಬಾರಿಗೆ U19 World Cup ಗೆದ್ದು ಬೀಗಿದ ಭಾರತ

U19 World Cup: ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ…

10 hours ago

ಬಾಕಿ ರೈತರ ರಾಗಿ ನೋಂದಣಿಗೆ ಅವಕಾಶ ನೀಡುವಂತೆ ಒತ್ತಾಯ: ರಾಗಿ ಖರೀದಿ ಕೇಂದ್ರದ ಮುಂದೆ ರೈತ ಸಂಘದಿಂದ ಪ್ರತಿಭಟನೆ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡುತ್ತಿರುವ ಸರ್ಕಾರ, ರೈತರಿಂದ ನೋಂದಣಿ ಪ್ರಕ್ರಿಯೆ ಮಾಡಿಸಿಕೊಂಡಿದೆ. ಆದರೆ, ತಾಲ್ಲೂಕಿನಲ್ಲಿ ಇನ್ನೂ ಒಂದೂವರೆ…

11 hours ago

2013-18ರಲ್ಲಿ ಇದ್ದ ಸಿಎಂ ಸಿದ್ದರಾಮಯ್ಯನವರ ವರ್ಚಸ್ಸು ಕುಗ್ಗುತ್ತಿದೆ-ಶಾಸಕ ಧೀರಜ್ ಮುನಿರಾಜ್

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮೂರು ಬಜೆಟ್ ಮಂಡನೆಯಾಗಿವೆ. ರಾಜ್ಯಪಾಲರಿಂದ ಮೂರು ಭಾಷಣಗಳು ನಡೆದಿವೆ. ಮೂರು ಬಜೆಟ್ ನಲ್ಲಿ ಈ…

12 hours ago

ಸಿಎಂ ಕುರ್ಚಿ ಕದನ ವಿಚಾರ: ‘ನಾಕೊಡೆ ನಿ ಬಿಡೆ’ ಕಪ್ಪಕಾಣಿಕೆಗಾಗಿ ಹೈಕಮಾಂಡ್ ಆಟ- ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ…

13 hours ago

ಕಾಂಗ್ರೆಸ್ ವೋಟ್ ಚೋರಿ ಮಾಡಿ ಸೋತಿದೆ. ಮೋದಿ ದಿಲ್ ಚೋರಿ ಮಾಡಿ ಗೆದ್ದಿದ್ದಾರೆ- ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಕೇಂದ್ರ ಸರ್ಕಾರವು…

15 hours ago