ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ನಾಗರಕೆರೆಯನ್ನು ಪುನರುಜ್ಜೀವನಗೊಳಿಸುವ ಸಂಬಂಧ ಫಾಕ್ಸ್ ಕಾನ್ (Foxcon) ಸಂಸ್ಥೆ ರವರು ರೂ.03 ಕೋಟಿಯ ಸಿ.ಇ.ಆರ್ (ಕಾರ್ಪೋರೇಟ್ ಎನ್ವಿರಾನ್ಮೆಂಟ್ ರೆಸ್ಪಾನ್ಸಿಬಲ್) ಅನುದಾನದಡಿ ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫಾಕ್ಸ್ ಕಾನ್ ಸಂಸ್ಥೆಯವರು ನಾಗರಕೆರೆ ಪುನರುಜ್ಜೀವನಗೊಳಿಸುವ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದೆ. ಈ ಕುರಿತು ಇಂದು ವಿವಿಧ ಇಲಾಖೆಗಳ ಸಮನ್ವಯ ದೊಂದಿಗೆ ಕೂಲಂಕಷವಾಗಿ ಚರ್ಚಿಸಲಾಗಿದೆ.
ಕರೆ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗಳ್ಳಲಾಗುತ್ತಿರುವ ಕಾಮಗಾರಿಯ ಸಂಬಂಧ ವಿವಿದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಸಲಹೆಗಳನ್ನು ಪಡೆದು ಅಂತಿಮವಾಗಿ ಫಾಕ್ಸ್ ಕಾನ್ (Foxcon) ರವರು ಸಿಇಆರ್ (corporate environment responsible) ಅನುದಾನದಡಿ ಸಿದ್ಧಪಡಿಸಲಾಗಿರುವ ವಿಸ್ತ್ರತ ಯೋಜನಾ ವರದಿಯನ್ನು ಅನುಮೋದನೆಗಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅನುಮೋದನೆ ಬಂದ ನಂತರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
*ಕೈಗಾರಿಕೆಗಳ ವಿಸ್ತೃತ ವರದಿ ನೀಡಲು ಸೂಚನೆ*
ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ನೀರಿನ ಮೂಲ, ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ, ತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿ ವರದಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾದ ರಮೇಶ್.ಬಿ.ಎಸ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಶ್ರೀಕಾಂತ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಅಂತರ್ಜಲ ಇಲಾಖೆ ಹಿರಿಯ ಭೂ ವಿಜ್ಞಾನಿ ಪಲ್ಲವಿ ಪರಿಸರ ಅಧಿಕಾರಿ ವಿಜಯ, Foxcon ಸಂಸ್ಥೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…