ದೊಡ್ಡಬಳ್ಳಾಪುರ, ನೆಲಮಂಗಲ ಕ್ಷೇತ್ರಗಳ ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಅಹವಾಲು ಸಲ್ಲಿಸಲು ಅವಕಾಶ

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣೆ ಸಂಬಂಧ ದೂರುಗಳಿದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ ಅವರನ್ನು ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರ(ಐಬಿ)ಗಳಲ್ಲಿ ಎಪ್ರಿಲ್ 26 ರಿಂದ ಮೇ 07 ರವರೆಗೆ ನಿಗದಿತ ಸಮಯದಂದು ಭೇಟಿ ಮಾಡಿ ಅಥವಾ ಸಾಮಾನ್ಯ ವೀಕ್ಷಕರ ಮೊ.ಸಂ.: 8618630558 ಅನ್ನು ಸಂಪರ್ಕಿಸಿ ಅಹವಾಲು ಸಲ್ಲಿಸಬಹುದಾಗಿದೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದ ನೆಲಮಂಗಲ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 26, 28, 30 ಹಾಗೂ ಮೇ 2, 4, 6 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 27, 29 ಹಾಗೂ ಮೇ 01, 03, 05, 07 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

ಸಾರ್ವಜನಿಕರು ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ, ನಿಗದಿತ ಸ್ಥಳ, ದಿನಾಂಕ, ಸಮಯದಂದು 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ(ಮೊ.ಸಂ.: 8618630558) ಅವರನ್ನು ಸಂಪರ್ಕಿಸಿ ಅಹವಾಲುಗಳನ್ನು ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

2 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

15 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

18 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

19 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

21 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

22 hours ago