ದೊಡ್ಡಬಳ್ಳಾಪುರ, ನೆಲಮಂಗಲ ಕ್ಷೇತ್ರಗಳ ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಅಹವಾಲು ಸಲ್ಲಿಸಲು ಅವಕಾಶ

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣೆ ಸಂಬಂಧ ದೂರುಗಳಿದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ ಅವರನ್ನು ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರ(ಐಬಿ)ಗಳಲ್ಲಿ ಎಪ್ರಿಲ್ 26 ರಿಂದ ಮೇ 07 ರವರೆಗೆ ನಿಗದಿತ ಸಮಯದಂದು ಭೇಟಿ ಮಾಡಿ ಅಥವಾ ಸಾಮಾನ್ಯ ವೀಕ್ಷಕರ ಮೊ.ಸಂ.: 8618630558 ಅನ್ನು ಸಂಪರ್ಕಿಸಿ ಅಹವಾಲು ಸಲ್ಲಿಸಬಹುದಾಗಿದೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದ ನೆಲಮಂಗಲ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 26, 28, 30 ಹಾಗೂ ಮೇ 2, 4, 6 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 27, 29 ಹಾಗೂ ಮೇ 01, 03, 05, 07 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

ಸಾರ್ವಜನಿಕರು ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ, ನಿಗದಿತ ಸ್ಥಳ, ದಿನಾಂಕ, ಸಮಯದಂದು 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ(ಮೊ.ಸಂ.: 8618630558) ಅವರನ್ನು ಸಂಪರ್ಕಿಸಿ ಅಹವಾಲುಗಳನ್ನು ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

9 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

15 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

21 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

22 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago