ದೊಡ್ಡಬಳ್ಳಾಪುರ ಬೈಪಾಸ್ ನಿಂದ ಹೊಸಕೋಟೆ ಯವರೆಗೆ, ಅತ್ತಿಬೆಲೆಯಿಂದ ಹೊಸಕೋಟೆ ಮಾರ್ಗದ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧದ ಕುರಿತು ಅಕ್ಷೇಪಣೆ ಸಲ್ಲಿಕೆಗೆ ಜುಲೈ 31ರವರೆಗೆ ಗಡುವು

ದೊಡ್ಡಬಳ್ಳಾಪುರ ಬೈಪಾಸ್‌ಯಿಂದ ಹೊಸಕೋಟೆ ಸೆಕ್ಷನ್ ರಾಷ್ಟ್ರೀಯ ಹೆದ್ದಾರಿ–648 (ಹಳೇಯ ರಾಷ್ಟ್ರೀಯ ಹೆದ್ದಾರಿ-207)ರ ರಸ್ತೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಅತ್ತಿಬೆಲೆ ಯಿಂದ ಹೊಸಕೋಟೆ (Four laning from km 74.270 to km 58.300) ಮಾರ್ಗವಾಗಿ ಹೋಗುವ ರಸ್ತೆಯಲ್ಲಿ ಭಾರೀ ವಾಹನಗಳು ಅಂದರೆ 3.75 ಮೀಟರ್‌ಗಿಂತ ಎತ್ತರವಾಗಿರುವ ವಾಹನಗಳು ಸದರಿ ಮಾರ್ಗದಲ್ಲಿ ಸಂಚರಿಸುವುದನ್ನು ನಿಷೇಧಿಸಿ, ಹೊಸ ಬೈಪಾಸ್ ರಸ್ತೆ (ರಾ.ಹೆ-648) ರಲ್ಲಿ ಸಂಚರಿಸಲು ಅನುವಾಗುವಂತೆ ಆದೇಶ ಹೊರಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರವರು ಕೋರಿರುವ ಮೇರೆಗೆ, The Karnataka motor vehicles rules 1989,Under rule 221(A)(5) ರಡಿಯಲ್ಲಿ ಆದೇಶ ಹೊರಡಿಸುವ ನಿಟ್ಟಿನಲ್ಲಿ ಈ ಉದ್ದೇಶದಿಂದ ಪ್ರತಿಕೂಲ ಪರಿಣಾಮಕ್ಕೊಳಗಾಗುವ ಸಂಭವವಿರುವ ಇತರೆ ಯಾವುದೇ ಹಿತಾಸಕ್ತಿಯನ್ನು ಹೊಂದಿರುವ ಯಾವುದೇ ಸಾರ್ವಜನಿಕರು ಅಥವಾ ಯಾವುದೇ ವ್ಯಕ್ತಿಯು ಈ ಸಾರ್ವಜನಿಕ ಪ್ರಕಟಣೆ ಹೊರಡಿಸಿದ ದಿನದಿಂದ 15 ದಿನದೊಳಗಾಗಿ ಅಂದರೆ ದಿನಾಂಕ 2023ರ  ಜುಲೈ 31 ರೊಳಗಾಗಿ ಸದರಿ ಉದ್ದೇಶದ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ರವರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ರವರಿಗೆ ಲಿಖಿತವಾಗಿ ಅಥವಾ ಈ ಕಛೇರಿಯ ಇ-ಮೇಲ್ ವಿಳಾಸ deo.bangalorer3@gmail.com ಗೆ ಸಲ್ಲಿಸಬಹುದಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

6 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

20 hours ago