ದೊಡ್ಡಬಳ್ಳಾಪುರ ಬೈಪಾಸ್ ನಿಂದ ಹೊಸಕೋಟೆ ಯವರೆಗೆ, ಅತ್ತಿಬೆಲೆಯಿಂದ ಹೊಸಕೋಟೆ ಮಾರ್ಗದ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧದ ಕುರಿತು ಅಕ್ಷೇಪಣೆ ಸಲ್ಲಿಕೆಗೆ ಜುಲೈ 31ರವರೆಗೆ ಗಡುವು

ದೊಡ್ಡಬಳ್ಳಾಪುರ ಬೈಪಾಸ್‌ಯಿಂದ ಹೊಸಕೋಟೆ ಸೆಕ್ಷನ್ ರಾಷ್ಟ್ರೀಯ ಹೆದ್ದಾರಿ–648 (ಹಳೇಯ ರಾಷ್ಟ್ರೀಯ ಹೆದ್ದಾರಿ-207)ರ ರಸ್ತೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಅತ್ತಿಬೆಲೆ ಯಿಂದ ಹೊಸಕೋಟೆ (Four laning from km 74.270 to km 58.300) ಮಾರ್ಗವಾಗಿ ಹೋಗುವ ರಸ್ತೆಯಲ್ಲಿ ಭಾರೀ ವಾಹನಗಳು ಅಂದರೆ 3.75 ಮೀಟರ್‌ಗಿಂತ ಎತ್ತರವಾಗಿರುವ ವಾಹನಗಳು ಸದರಿ ಮಾರ್ಗದಲ್ಲಿ ಸಂಚರಿಸುವುದನ್ನು ನಿಷೇಧಿಸಿ, ಹೊಸ ಬೈಪಾಸ್ ರಸ್ತೆ (ರಾ.ಹೆ-648) ರಲ್ಲಿ ಸಂಚರಿಸಲು ಅನುವಾಗುವಂತೆ ಆದೇಶ ಹೊರಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರವರು ಕೋರಿರುವ ಮೇರೆಗೆ, The Karnataka motor vehicles rules 1989,Under rule 221(A)(5) ರಡಿಯಲ್ಲಿ ಆದೇಶ ಹೊರಡಿಸುವ ನಿಟ್ಟಿನಲ್ಲಿ ಈ ಉದ್ದೇಶದಿಂದ ಪ್ರತಿಕೂಲ ಪರಿಣಾಮಕ್ಕೊಳಗಾಗುವ ಸಂಭವವಿರುವ ಇತರೆ ಯಾವುದೇ ಹಿತಾಸಕ್ತಿಯನ್ನು ಹೊಂದಿರುವ ಯಾವುದೇ ಸಾರ್ವಜನಿಕರು ಅಥವಾ ಯಾವುದೇ ವ್ಯಕ್ತಿಯು ಈ ಸಾರ್ವಜನಿಕ ಪ್ರಕಟಣೆ ಹೊರಡಿಸಿದ ದಿನದಿಂದ 15 ದಿನದೊಳಗಾಗಿ ಅಂದರೆ ದಿನಾಂಕ 2023ರ  ಜುಲೈ 31 ರೊಳಗಾಗಿ ಸದರಿ ಉದ್ದೇಶದ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ರವರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ರವರಿಗೆ ಲಿಖಿತವಾಗಿ ಅಥವಾ ಈ ಕಛೇರಿಯ ಇ-ಮೇಲ್ ವಿಳಾಸ deo.bangalorer3@gmail.com ಗೆ ಸಲ್ಲಿಸಬಹುದಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago