ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಹುಟ್ಟುಹಬ್ಬ ಹಿನ್ನೆಲೆ‌ ತಾಲ್ಲೂಕಿನ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 100ಕ್ಕೂ ಹೆಚ್ಚು ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಚುಂಚೇಗೌಡ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅವರ ಆರೋಗ್ಯ, ಆಯುಷ್ಯ ಹಾಗೂ ಸಾರ್ವಜನಿಕ ಸೇವೆಗೆ ಮತ್ತಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ವಿ ಮಹೇಶ್, ಆರ್ ವಿ ಮನು, ದೇವರ ಆಶೀರ್ವಾದ ಸದಾ ಚುಂಚೇಗೌಡ ಅವರ ಮೇಲಿರಲಿ. ಅವರಿಗೆ ಉತ್ತಮ ಆರೋಗ್ಯ, ಐಶ್ವರ್ಯ ಹಾಗೂ ಜನಸೇವೆ ಮಾಡುವಂತಹ ಇನ್ನಷ್ಟು ಉನ್ನತ ಹುದ್ದೆ ಮತ್ತು ಅಧಿಕಾರ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ MMS ಗ್ರೂಪ್ ನ ಆರ್ ವಿ ಶಿವಕುಮಾರ್, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

Ramesh Babu

Journalist

Recent Posts

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

3 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

5 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

8 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

13 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

1 day ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

1 day ago