ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಸಿ.ಎನ್.ರಾಜಶೇಖರ್ ಆಯ್ಕೆ: ನಗರದಲ್ಲಿ ಗಡಿಯಾರ ಸ್ತಂಭ ನಿರ್ಮಾಣಕ್ಕೆ ನಿರ್ಧಾರ

ಸುವರ್ಣ ಸಂಭ್ರಮ ಪ್ರಯುಕ್ತ ತಾಲೂಕಿನ ಜನತೆಯಲ್ಲಿ ಶಾಶ್ವತವಾಗಿ ಉಳಿಯುವಂತೆ ಟಿಬಿ ವೃತ್ತದ ಬಳಿ ಗಡಿಯಾರ ಸ್ತಂಭ ನಿರ್ಮಾಣ ಮಾಡಲಿದ್ದೇವೆ ಎಂದು ಲಯನ್ಸ್‌ ಕ್ಲಬ್ ನೂತನ ಅಧ್ಯಕ್ಷ ಸಿ.ಎನ್.ರಾಜಶೇಖರ್ ತಿಳಿಸಿದರು.

ನಗರದ ಹೊರವಲಯದ ನವೋದಯ ಶಾಲೆ ಸಮೀಪದ ಖಾಸಗಿ ಹೋಟೆಲ್ ನಲ್ಲಿ ನಡೆದ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿಯಾರ ಸ್ತಂಭದ ಜೊತೆ ತಾಲೂಕಿನ ಜನತೆಗೆ ಉಪಯುಕ್ತವಾಗುವಂತೆ ಕಣ್ಣಿನ ಆಪರೇಷನ್ ಥಿಯೇಟರ್, ರಕ್ತದಾನ ಬ್ಯಾಂಕ್ ಕಟ್ಟಡವನ್ನೂ ಸಹ ಸ್ಥಾಪನೆ ಮಾಡಲಿದ್ದೇವೆ ಎಂದರು.

50 ವರ್ಷದಿಂದಲೂ ನಡೆದುಕೊಂಡುಬಂದಂತಹ ಉಚಿತ ಕಣ್ಣು ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರ, ಆರೋಗ್ಯ ಶಿಬಿರ, ಶೈಕ್ಷಣಿಕ ಶಿಬಿರ, ಪರಿಸರ ಸಂರಕ್ಷಣೆ, ಉಚಿತ ಕಂಪ್ಯೂಟರ್ ಶಿಕ್ಷಣ, ರೈತರ ಸಮಾವೇಶ, ರಾಸುಗಳ ಶಿಬಿರ ಸೇರಿದಂತೆ ಇತರೆ ಸಮಾಜ ಸೇವೆಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

2023-24ನೇ ಸಾಲಿನಲ್ಲಿ 12 ಕಣ್ಣಿನ ತಪಾಸಣೆ, 12 ಡಯಾಬಿಟಿಸ್ ತಪಾಸಣೆ, 2 ಪಶು ಆರೋಗ್ಯ ತಪಾಸಣೆ, 2 ಆರೋಗ್ಯ ತಪಾಸಣೆ ಶಿಬಿರ, ಮಕ್ಕಳು, ಸಾರ್ವಜನಿಕರಿಗೆ ಆಪ್ತ ಸಮಾಲೋಚನಾ ಶಿಬಿರ, ಕನ್ನಡ ಕಲರವ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಸಾಮಾಜಿಕ ಸೇವಾಕಾರ್ಯಗಳನ್ನು ನೆರವೇರಿಸಲಿದ್ದೇವೆ ಎಂದರು.

 ವೇಳೆ ಮಾಜಿ ಅಧ್ಯಕ್ಷ ಎಸ್.ಪ್ರಕಾಶ್, ಕಾರ್ಯದರ್ಶಿ ರಮಾಕಾಂತ್, ಹುಲಿಕಲ್ ನಟರಾಜ್, ಆರ್.ಎಸ್.ಮಂಜುನಾಥ್ ಸೇರಿದಂತೆ 18 ಮಂದಿ ನಿರ್ದೇಶಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

10 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

11 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago