ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಸಿ.ಎನ್.ರಾಜಶೇಖರ್ ಆಯ್ಕೆ: ನಗರದಲ್ಲಿ ಗಡಿಯಾರ ಸ್ತಂಭ ನಿರ್ಮಾಣಕ್ಕೆ ನಿರ್ಧಾರ

ಸುವರ್ಣ ಸಂಭ್ರಮ ಪ್ರಯುಕ್ತ ತಾಲೂಕಿನ ಜನತೆಯಲ್ಲಿ ಶಾಶ್ವತವಾಗಿ ಉಳಿಯುವಂತೆ ಟಿಬಿ ವೃತ್ತದ ಬಳಿ ಗಡಿಯಾರ ಸ್ತಂಭ ನಿರ್ಮಾಣ ಮಾಡಲಿದ್ದೇವೆ ಎಂದು ಲಯನ್ಸ್‌ ಕ್ಲಬ್ ನೂತನ ಅಧ್ಯಕ್ಷ ಸಿ.ಎನ್.ರಾಜಶೇಖರ್ ತಿಳಿಸಿದರು.

ನಗರದ ಹೊರವಲಯದ ನವೋದಯ ಶಾಲೆ ಸಮೀಪದ ಖಾಸಗಿ ಹೋಟೆಲ್ ನಲ್ಲಿ ನಡೆದ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿಯಾರ ಸ್ತಂಭದ ಜೊತೆ ತಾಲೂಕಿನ ಜನತೆಗೆ ಉಪಯುಕ್ತವಾಗುವಂತೆ ಕಣ್ಣಿನ ಆಪರೇಷನ್ ಥಿಯೇಟರ್, ರಕ್ತದಾನ ಬ್ಯಾಂಕ್ ಕಟ್ಟಡವನ್ನೂ ಸಹ ಸ್ಥಾಪನೆ ಮಾಡಲಿದ್ದೇವೆ ಎಂದರು.

50 ವರ್ಷದಿಂದಲೂ ನಡೆದುಕೊಂಡುಬಂದಂತಹ ಉಚಿತ ಕಣ್ಣು ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರ, ಆರೋಗ್ಯ ಶಿಬಿರ, ಶೈಕ್ಷಣಿಕ ಶಿಬಿರ, ಪರಿಸರ ಸಂರಕ್ಷಣೆ, ಉಚಿತ ಕಂಪ್ಯೂಟರ್ ಶಿಕ್ಷಣ, ರೈತರ ಸಮಾವೇಶ, ರಾಸುಗಳ ಶಿಬಿರ ಸೇರಿದಂತೆ ಇತರೆ ಸಮಾಜ ಸೇವೆಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

2023-24ನೇ ಸಾಲಿನಲ್ಲಿ 12 ಕಣ್ಣಿನ ತಪಾಸಣೆ, 12 ಡಯಾಬಿಟಿಸ್ ತಪಾಸಣೆ, 2 ಪಶು ಆರೋಗ್ಯ ತಪಾಸಣೆ, 2 ಆರೋಗ್ಯ ತಪಾಸಣೆ ಶಿಬಿರ, ಮಕ್ಕಳು, ಸಾರ್ವಜನಿಕರಿಗೆ ಆಪ್ತ ಸಮಾಲೋಚನಾ ಶಿಬಿರ, ಕನ್ನಡ ಕಲರವ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಸಾಮಾಜಿಕ ಸೇವಾಕಾರ್ಯಗಳನ್ನು ನೆರವೇರಿಸಲಿದ್ದೇವೆ ಎಂದರು.

 ವೇಳೆ ಮಾಜಿ ಅಧ್ಯಕ್ಷ ಎಸ್.ಪ್ರಕಾಶ್, ಕಾರ್ಯದರ್ಶಿ ರಮಾಕಾಂತ್, ಹುಲಿಕಲ್ ನಟರಾಜ್, ಆರ್.ಎಸ್.ಮಂಜುನಾಥ್ ಸೇರಿದಂತೆ 18 ಮಂದಿ ನಿರ್ದೇಶಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

5 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago