ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಸಿ.ಎನ್.ರಾಜಶೇಖರ್ ಆಯ್ಕೆ: ನಗರದಲ್ಲಿ ಗಡಿಯಾರ ಸ್ತಂಭ ನಿರ್ಮಾಣಕ್ಕೆ ನಿರ್ಧಾರ

ಸುವರ್ಣ ಸಂಭ್ರಮ ಪ್ರಯುಕ್ತ ತಾಲೂಕಿನ ಜನತೆಯಲ್ಲಿ ಶಾಶ್ವತವಾಗಿ ಉಳಿಯುವಂತೆ ಟಿಬಿ ವೃತ್ತದ ಬಳಿ ಗಡಿಯಾರ ಸ್ತಂಭ ನಿರ್ಮಾಣ ಮಾಡಲಿದ್ದೇವೆ ಎಂದು ಲಯನ್ಸ್‌ ಕ್ಲಬ್ ನೂತನ ಅಧ್ಯಕ್ಷ ಸಿ.ಎನ್.ರಾಜಶೇಖರ್ ತಿಳಿಸಿದರು.

ನಗರದ ಹೊರವಲಯದ ನವೋದಯ ಶಾಲೆ ಸಮೀಪದ ಖಾಸಗಿ ಹೋಟೆಲ್ ನಲ್ಲಿ ನಡೆದ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿಯಾರ ಸ್ತಂಭದ ಜೊತೆ ತಾಲೂಕಿನ ಜನತೆಗೆ ಉಪಯುಕ್ತವಾಗುವಂತೆ ಕಣ್ಣಿನ ಆಪರೇಷನ್ ಥಿಯೇಟರ್, ರಕ್ತದಾನ ಬ್ಯಾಂಕ್ ಕಟ್ಟಡವನ್ನೂ ಸಹ ಸ್ಥಾಪನೆ ಮಾಡಲಿದ್ದೇವೆ ಎಂದರು.

50 ವರ್ಷದಿಂದಲೂ ನಡೆದುಕೊಂಡುಬಂದಂತಹ ಉಚಿತ ಕಣ್ಣು ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರ, ಆರೋಗ್ಯ ಶಿಬಿರ, ಶೈಕ್ಷಣಿಕ ಶಿಬಿರ, ಪರಿಸರ ಸಂರಕ್ಷಣೆ, ಉಚಿತ ಕಂಪ್ಯೂಟರ್ ಶಿಕ್ಷಣ, ರೈತರ ಸಮಾವೇಶ, ರಾಸುಗಳ ಶಿಬಿರ ಸೇರಿದಂತೆ ಇತರೆ ಸಮಾಜ ಸೇವೆಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

2023-24ನೇ ಸಾಲಿನಲ್ಲಿ 12 ಕಣ್ಣಿನ ತಪಾಸಣೆ, 12 ಡಯಾಬಿಟಿಸ್ ತಪಾಸಣೆ, 2 ಪಶು ಆರೋಗ್ಯ ತಪಾಸಣೆ, 2 ಆರೋಗ್ಯ ತಪಾಸಣೆ ಶಿಬಿರ, ಮಕ್ಕಳು, ಸಾರ್ವಜನಿಕರಿಗೆ ಆಪ್ತ ಸಮಾಲೋಚನಾ ಶಿಬಿರ, ಕನ್ನಡ ಕಲರವ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಸಾಮಾಜಿಕ ಸೇವಾಕಾರ್ಯಗಳನ್ನು ನೆರವೇರಿಸಲಿದ್ದೇವೆ ಎಂದರು.

 ವೇಳೆ ಮಾಜಿ ಅಧ್ಯಕ್ಷ ಎಸ್.ಪ್ರಕಾಶ್, ಕಾರ್ಯದರ್ಶಿ ರಮಾಕಾಂತ್, ಹುಲಿಕಲ್ ನಟರಾಜ್, ಆರ್.ಎಸ್.ಮಂಜುನಾಥ್ ಸೇರಿದಂತೆ 18 ಮಂದಿ ನಿರ್ದೇಶಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

3 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

5 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

6 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

20 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

22 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 day ago