ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ಅಪಸ್ಮಾರ ದಿನಾಚರಣೆ (ಎಪಿಲೆಪ್ಸಿ ಡೇ) ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಭಿ (KABHI) ತಂಡದ ಸಮ್ಮಿಲಿತ ಆಯೋಜನೆಯೊಂದಿಗೆ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ದೋಡ್ಡಬಳ್ಳಾಪುರದ ಫೈತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ರ್ಯಾಲಿ ನಡೆಸಿದರು. “ಅಪಸ್ಮಾರ ಪಗಡಿನ ವಿಷಯವಲ್ಲ, ಚಿಕಿತ್ಸೆ ಪಡೆಯೋಣ, ಬದುಕು ಬೆಳಗಿಸೋಣ” ಎಂಬ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಕಭಿ ತಂಡದ ಅಧಿಕಾರಿಗಳು ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಅಪಸ್ಮಾರ ರೋಗದ ಬಗ್ಗೆ ಇನ್ನೂ ಭ್ರಮೆ ಇದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಜನರಲ್ಲಿ ಅರಿವು ಮೂಡಿಸಿ ಅವರ ಜೀವನಮಟ್ಟ ಸುಧಾರಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು.
ಈ ಯೋಜನೆಯ ಭಾಗವಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇದೇ ರೀತಿಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಭಿ ತಂಡ ಮುಂದಾಗಿದೆ ಎಂದು ಹೇಳಿದರು.
ರ್ಯಾಲಿ ಬಳಿಕ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಪಸ್ಮಾರದ ಲಕ್ಷಣಗಳು, ಚಿಕಿತ್ಸೆ ಮತ್ತು ತುರ್ತು ನಿರ್ವಹಣೆಯ ಬಗ್ಗೆ ವಿವರಣೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಂಜುನಾಥ್, ಆಯುಷ್ ಡಾ. ಹರಿಣಿ, ಡಾ.ಗಾಯತ್ರಿ, ಡಾ.ಅಮೃತಾ, ನರ್ಸಿಂಗ್ ಸೂಪರಿಂಟೆಂಡೆಂಟ್ಗಳಾದ ಶೈಲಜಾ ಹಾಗೂ ವಂದನಾ, ಕಭಿ ತಂಡದವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…