ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ಅಪಸ್ಮಾರ ದಿನಾಚರಣೆ (ಎಪಿಲೆಪ್ಸಿ ಡೇ) ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಭಿ (KABHI) ತಂಡದ ಸಮ್ಮಿಲಿತ ಆಯೋಜನೆಯೊಂದಿಗೆ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ದೋಡ್ಡಬಳ್ಳಾಪುರದ ಫೈತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ರ್ಯಾಲಿ ನಡೆಸಿದರು. “ಅಪಸ್ಮಾರ ಪಗಡಿನ ವಿಷಯವಲ್ಲ, ಚಿಕಿತ್ಸೆ ಪಡೆಯೋಣ, ಬದುಕು ಬೆಳಗಿಸೋಣ” ಎಂಬ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಕಭಿ ತಂಡದ ಅಧಿಕಾರಿಗಳು ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಅಪಸ್ಮಾರ ರೋಗದ ಬಗ್ಗೆ ಇನ್ನೂ ಭ್ರಮೆ ಇದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಜನರಲ್ಲಿ ಅರಿವು ಮೂಡಿಸಿ ಅವರ ಜೀವನಮಟ್ಟ ಸುಧಾರಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು.
ಈ ಯೋಜನೆಯ ಭಾಗವಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇದೇ ರೀತಿಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಭಿ ತಂಡ ಮುಂದಾಗಿದೆ ಎಂದು ಹೇಳಿದರು.
ರ್ಯಾಲಿ ಬಳಿಕ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಪಸ್ಮಾರದ ಲಕ್ಷಣಗಳು, ಚಿಕಿತ್ಸೆ ಮತ್ತು ತುರ್ತು ನಿರ್ವಹಣೆಯ ಬಗ್ಗೆ ವಿವರಣೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಂಜುನಾಥ್, ಆಯುಷ್ ಡಾ. ಹರಿಣಿ, ಡಾ.ಗಾಯತ್ರಿ, ಡಾ.ಅಮೃತಾ, ನರ್ಸಿಂಗ್ ಸೂಪರಿಂಟೆಂಡೆಂಟ್ಗಳಾದ ಶೈಲಜಾ ಹಾಗೂ ವಂದನಾ, ಕಭಿ ತಂಡದವರು ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…